ಹಾಸನ : ಇಬ್ಬರು ವ್ಯಕ್ತಿಗಳ ನಡುವೆ ಮದ್ಯ ಕುಡಿಯುವ ಸ್ಪರ್ಧೆ ನಡೆದು ಮಿತಿ ಮೀರಿ ಕುಡಿದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಹೊಳೆನರಸೀಪುರದ ಸಿಗರನಹಳ್ಳಿಯಲ್ಲಿ ನಡೆದಿದೆ.
ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳ ನಡುವೆ ಅರ್ಧ ಗಂಟೆಯಲ್ಲಿ ಒಂದು ಲೀಟರ್ ಮದ್ಯ ಕುಡಿಯುವ ಸ್ಪರ್ಧೆ ಏರ್ಪಟ್ಟಿದೆ. ಸ್ಪರ್ಧೆಯಲ್ಲಿ ಹೆಚ್ಚು ಮದ್ಯ ಸೇವನೆ ಮಾಡಿದ ತಿಮ್ಮೇಗೌಡ (60) ಎಂಬಾತ ಸಾವಿಗೀಡಾಗಿದ್ದಾರೆ. ಮೃತ ತಿಮ್ಮೇಗೌಡ ಹಾಗೂ ದೇವರಾಜ ನಡುವೆ ಈ ಸ್ಪರ್ಧೆ ಏರ್ಪಟ್ಟಿತ್ತು. ಈ ಇಬ್ಬರಿಗೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕೃಷ್ಣೇಗೌಡ ಮದ್ಯದ ಪ್ಯಾಕೆಟ್ಗಳನ್ನು ನೀಡಿದ್ದರು ಎನ್ನಲಾಗಿದೆ.
ತಿಮ್ಮೇಗೌಡನಿಗೆ ಮದ್ಯ ವಿಪರೀತವಾಗುತ್ತಿದ್ದಂತೆ ಬಾಯಲ್ಲಿ ರಕ್ತ ಬರಲಾರಂಭಿಸಿದೆ. ಬಳಿಕ ದೇವರಾಜು ಮತ್ತು ಕೃಷ್ಣೇಗೌಡ ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ಅಸ್ವಸ್ಥವಾಗಿ ಬಿದ್ದಿದ್ದ ಆತನನ್ನು ಗ್ರಾಮಸ್ಥರು ಎತ್ತಿಕೊಂಡು ಬಂದು ಮನೆಯಲ್ಲಿ ಮಲಗಿಸಿದ್ದರು. ಈ ವೇಳೆ ತಿಮ್ಮೇಗೌಡ ಸಾವಿಗೀಡಾಗಿದ್ದಾರೆ.
ಈ ಸಂಬಂಧ ತಿಮ್ಮೇಗೌಡನ ಪುತ್ರಿ, ದೇವರಾಜು ಹಾಗೂ ಕೃಷ್ಣೇಗೌಡನ ವಿರುದ್ಧ ದೂರು ದಾಖಲಿಸಿದ್ದಾರೆ. ಅಲ್ಲದೇ ಅಕ್ರಮ ಮದ್ಯ ಮಾರಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…