ಚನ್ನರಾಯಪಟ್ಟಣ: ಹಲವು ವಿಶೇಷತೆಗಳನ್ನು ಹೊಂದಿರುವ ಚನ್ನರಾಯಪಟ್ಟಣದ ಗ್ರಾಮ ದೇವತೆ ವಳಗೇರಮ್ಮ ದೇವಸ್ಥಾನಕ್ಕೆ ಇದೀಗ ಹೊಸ ರಥ ಸಮರ್ಪಣೆಯಾಗಿದ್ದು, ಜಾತ್ರಾ ಮಹೋತ್ಸವಕ್ಕೆ ಹೊಸ ಮೆರುಗು ಬಂದಂತಾಗಿದೆ.
15ನೇ ಶತಮಾನದಲ್ಲಿ ಪಾಳೇಗಾರರ ಆಡಳಿತಕ್ಕೆ ಒಳಪಟ್ಟ ಬಳಿಕ ಚನ್ನರಾಯಪಟ್ಟಣ ಎಂಬ ಹೆಸರು ಬಂತು. ಇದಕ್ಕೂ ಮುನ್ನ ಕೊಳತ್ತೂರು, ನಂತರ ಅಮೃತನಾಥಪುರ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು.
ಅಮಾನಿಕೆರೆಯ ಮುಂಭಾಗದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ಗ್ರಾಮದೇವತೆ ವಳಗೇರಮ್ಮ ದೇವಸ್ಥಾನವಿದೆ. ಪ್ರತಿ ವರ್ಷ ನರಕ ಚತುರ್ದಶಿಯಂದು ಮೂರು ದಿನ ಜಾತ್ರಾ ಮಹೋತ್ಸವದ ವಿಜೃಂಭಣೆಯಿಂದ ಜರುಗುತ್ತದೆ.
ಈ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಚಿಕ್ಕಮ್ಮದೇವಿ ದೇವಸ್ಥಾನ ಇದೆ. ಮೊದಲನೇ ದಿನ ತೇರಿನಲ್ಲಿ ವಳಗೇರಮ್ಮ ದೇವತೆಯನ್ನು ಪ್ರತಿಷ್ಠಾಪಿಸಿ ಪಟ್ಟಣದಲ್ಲಿ ರಥೋತ್ಸವ ನಡೆಸಲಾಗುತ್ತದೆ. ಸುತ್ತಲಿನ ಗ್ರಾಮಗಳಾದ ಗೂರಮಾರನಹಳ್ಳಿ, ಗುಂಡಶೆಟ್ಟಿಹಳ್ಳಿ, ಗೂರನಹಳ್ಳಿ ಬಡಾವಣೆ, ಬೆಲಸಿಂದ, ಗಾಣಿಗರಬೀದಿ, ತಗ್ಯಮ್ಮಬಡಾವಣೆ, ಡಿ.ಕಾಳೇನಹಳ್ಳಿ, ಕೆರೆಚಿಕ್ಕೇನಹಳ್ಳಿಯ ಗ್ರಾಮಸ್ಥರು ಬೆಳೆದ ದವಸ, ಧಾನ್ಯಗಳಿಂದ ತುಂಬಿದ ಎತ್ತಿನಗಾಡಿ ಮತ್ತು ರಾಸುಗಳನ್ನು ಸಿಂಗರಿಸಿ, ಹಸಿರು ಬಂಡಿಯನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆತರುವುದು ವಿಶೇಷ. ದೇಗುಲದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಲಾಗುತ್ತದೆ.
ಹರಕೆ ಹೊತ್ತ ಸುಮಂಗಲಿಯರು ಬಾಯಿಬೀಗ ಧರಿಸಿ ಪೂಜೆ ಸಲ್ಲಿಸುತ್ತಾರೆ. ರಥದಿಂದ ದೇವರನ್ನು ಕೆಳಗಿಳಿಸಿ ಉಯ್ಯಾಲೋತ್ಸವ, ಸಿಡಿ ಉತ್ಸವ ಮತ್ತು ಕೊಂಡೋತ್ಸವ ನಡೆಸಲಾಗುತ್ತದೆ. ಮಾರನೇ ದಿನ ಚಂದ್ರಮಂಡಲೋತ್ಸವದಲ್ಲಿ ದೇವಿಯನ್ನು ತೇರಿನಲ್ಲಿ ಕುಳ್ಳಿರಿಸಿ ಮೆರವಣಿಗೆ ಮಾಡಲಾಗುತ್ತದೆ. ಮೂರನೇ ದಿನ ದೀಪಾವಳಿಯಂದು ದೇವರಿಗೆ ಪೂಜೆ ಸಲ್ಲಿಸಿ ಅದೇ ದಿನರಾತ್ರಿ ವಾಹನದಲ್ಲಿ ಉತ್ಸವ ನಡೆಸಲಾಗುತ್ತದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…