ಹಾಸನ

ಚನ್ನರಾಯಪಟ್ಟಣದ ವಳಗೇರಮ್ಮ ಜಾತ್ರೆಗೆ ಹೊಸ ಮೆರುಗು ನೀಡಿದ ನೂತನ ರಥ

ಚನ್ನರಾಯಪಟ್ಟಣ: ಹಲವು ವಿಶೇಷತೆಗಳನ್ನು ಹೊಂದಿರುವ ಚನ್ನರಾಯಪಟ್ಟಣದ ಗ್ರಾಮ ದೇವತೆ ವಳಗೇರಮ್ಮ ದೇವಸ್ಥಾನಕ್ಕೆ ಇದೀಗ ಹೊಸ ರಥ ಸಮರ್ಪಣೆಯಾಗಿದ್ದು, ಜಾತ್ರಾ ಮಹೋತ್ಸವಕ್ಕೆ ಹೊಸ ಮೆರುಗು ಬಂದಂತಾಗಿದೆ.

15ನೇ ಶತಮಾನದಲ್ಲಿ ಪಾಳೇಗಾರರ ಆಡಳಿತಕ್ಕೆ ಒಳಪಟ್ಟ ಬಳಿಕ ಚನ್ನರಾಯಪಟ್ಟಣ ಎಂಬ ಹೆಸರು ಬಂತು. ಇದಕ್ಕೂ ಮುನ್ನ ಕೊಳತ್ತೂರು, ನಂತರ ಅಮೃತನಾಥಪುರ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು.

ಅಮಾನಿಕೆರೆಯ ಮುಂಭಾಗದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ಗ್ರಾಮದೇವತೆ ವಳಗೇರಮ್ಮ ದೇವಸ್ಥಾನವಿದೆ. ಪ್ರತಿ ವರ್ಷ ನರಕ ಚತುರ್ದಶಿಯಂದು ಮೂರು ದಿನ ಜಾತ್ರಾ ಮಹೋತ್ಸವದ ವಿಜೃಂಭಣೆಯಿಂದ ಜರುಗುತ್ತದೆ.

ಈ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಚಿಕ್ಕಮ್ಮದೇವಿ ದೇವಸ್ಥಾನ ಇದೆ. ಮೊದಲನೇ ದಿನ ತೇರಿನಲ್ಲಿ ವಳಗೇರಮ್ಮ ದೇವತೆಯನ್ನು ಪ್ರತಿಷ್ಠಾಪಿಸಿ ಪಟ್ಟಣದಲ್ಲಿ ರಥೋತ್ಸವ ನಡೆಸಲಾಗುತ್ತದೆ. ಸುತ್ತಲಿನ ಗ್ರಾಮಗಳಾದ ಗೂರಮಾರನಹಳ್ಳಿ, ಗುಂಡಶೆಟ್ಟಿಹಳ್ಳಿ, ಗೂರನಹಳ್ಳಿ ಬಡಾವಣೆ, ಬೆಲಸಿಂದ, ಗಾಣಿಗರಬೀದಿ, ತಗ್ಯಮ್ಮಬಡಾವಣೆ, ಡಿ.ಕಾಳೇನಹಳ್ಳಿ, ಕೆರೆಚಿಕ್ಕೇನಹಳ್ಳಿಯ ಗ್ರಾಮಸ್ಥರು ಬೆಳೆದ ದವಸ, ಧಾನ್ಯಗಳಿಂದ ತುಂಬಿದ ಎತ್ತಿನಗಾಡಿ ಮತ್ತು ರಾಸುಗಳನ್ನು ಸಿಂಗರಿಸಿ, ಹಸಿರು ಬಂಡಿಯನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆತರುವುದು ವಿಶೇಷ. ದೇಗುಲದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಲಾಗುತ್ತದೆ.

ಹರಕೆ ಹೊತ್ತ ಸುಮಂಗಲಿಯರು ಬಾಯಿಬೀಗ ಧರಿಸಿ ಪೂಜೆ ಸಲ್ಲಿಸುತ್ತಾರೆ. ರಥದಿಂದ ದೇವರನ್ನು ಕೆಳಗಿಳಿಸಿ ಉಯ್ಯಾಲೋತ್ಸವ, ಸಿಡಿ ಉತ್ಸವ ಮತ್ತು ಕೊಂಡೋತ್ಸವ ನಡೆಸಲಾಗುತ್ತದೆ. ಮಾರನೇ ದಿನ ಚಂದ್ರಮಂಡಲೋತ್ಸವದಲ್ಲಿ ದೇವಿಯನ್ನು ತೇರಿನಲ್ಲಿ ಕುಳ್ಳಿರಿಸಿ ಮೆರವಣಿಗೆ ಮಾಡಲಾಗುತ್ತದೆ. ಮೂರನೇ ದಿನ ದೀಪಾವಳಿಯಂದು ದೇವರಿಗೆ ಪೂಜೆ ಸಲ್ಲಿಸಿ ಅದೇ ದಿನರಾತ್ರಿ ವಾಹನದಲ್ಲಿ ಉತ್ಸವ ನಡೆಸಲಾಗುತ್ತದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

55 mins ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

1 hour ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

1 hour ago

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

12 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

12 hours ago