ಹಾಸನ

ಚನ್ನರಾಯಪಟ್ಟಣದ ವಳಗೇರಮ್ಮ ಜಾತ್ರೆಗೆ ಹೊಸ ಮೆರುಗು ನೀಡಿದ ನೂತನ ರಥ

ಚನ್ನರಾಯಪಟ್ಟಣ: ಹಲವು ವಿಶೇಷತೆಗಳನ್ನು ಹೊಂದಿರುವ ಚನ್ನರಾಯಪಟ್ಟಣದ ಗ್ರಾಮ ದೇವತೆ ವಳಗೇರಮ್ಮ ದೇವಸ್ಥಾನಕ್ಕೆ ಇದೀಗ ಹೊಸ ರಥ ಸಮರ್ಪಣೆಯಾಗಿದ್ದು, ಜಾತ್ರಾ ಮಹೋತ್ಸವಕ್ಕೆ ಹೊಸ ಮೆರುಗು ಬಂದಂತಾಗಿದೆ.

15ನೇ ಶತಮಾನದಲ್ಲಿ ಪಾಳೇಗಾರರ ಆಡಳಿತಕ್ಕೆ ಒಳಪಟ್ಟ ಬಳಿಕ ಚನ್ನರಾಯಪಟ್ಟಣ ಎಂಬ ಹೆಸರು ಬಂತು. ಇದಕ್ಕೂ ಮುನ್ನ ಕೊಳತ್ತೂರು, ನಂತರ ಅಮೃತನಾಥಪುರ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು.

ಅಮಾನಿಕೆರೆಯ ಮುಂಭಾಗದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ಗ್ರಾಮದೇವತೆ ವಳಗೇರಮ್ಮ ದೇವಸ್ಥಾನವಿದೆ. ಪ್ರತಿ ವರ್ಷ ನರಕ ಚತುರ್ದಶಿಯಂದು ಮೂರು ದಿನ ಜಾತ್ರಾ ಮಹೋತ್ಸವದ ವಿಜೃಂಭಣೆಯಿಂದ ಜರುಗುತ್ತದೆ.

ಈ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಚಿಕ್ಕಮ್ಮದೇವಿ ದೇವಸ್ಥಾನ ಇದೆ. ಮೊದಲನೇ ದಿನ ತೇರಿನಲ್ಲಿ ವಳಗೇರಮ್ಮ ದೇವತೆಯನ್ನು ಪ್ರತಿಷ್ಠಾಪಿಸಿ ಪಟ್ಟಣದಲ್ಲಿ ರಥೋತ್ಸವ ನಡೆಸಲಾಗುತ್ತದೆ. ಸುತ್ತಲಿನ ಗ್ರಾಮಗಳಾದ ಗೂರಮಾರನಹಳ್ಳಿ, ಗುಂಡಶೆಟ್ಟಿಹಳ್ಳಿ, ಗೂರನಹಳ್ಳಿ ಬಡಾವಣೆ, ಬೆಲಸಿಂದ, ಗಾಣಿಗರಬೀದಿ, ತಗ್ಯಮ್ಮಬಡಾವಣೆ, ಡಿ.ಕಾಳೇನಹಳ್ಳಿ, ಕೆರೆಚಿಕ್ಕೇನಹಳ್ಳಿಯ ಗ್ರಾಮಸ್ಥರು ಬೆಳೆದ ದವಸ, ಧಾನ್ಯಗಳಿಂದ ತುಂಬಿದ ಎತ್ತಿನಗಾಡಿ ಮತ್ತು ರಾಸುಗಳನ್ನು ಸಿಂಗರಿಸಿ, ಹಸಿರು ಬಂಡಿಯನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆತರುವುದು ವಿಶೇಷ. ದೇಗುಲದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಲಾಗುತ್ತದೆ.

ಹರಕೆ ಹೊತ್ತ ಸುಮಂಗಲಿಯರು ಬಾಯಿಬೀಗ ಧರಿಸಿ ಪೂಜೆ ಸಲ್ಲಿಸುತ್ತಾರೆ. ರಥದಿಂದ ದೇವರನ್ನು ಕೆಳಗಿಳಿಸಿ ಉಯ್ಯಾಲೋತ್ಸವ, ಸಿಡಿ ಉತ್ಸವ ಮತ್ತು ಕೊಂಡೋತ್ಸವ ನಡೆಸಲಾಗುತ್ತದೆ. ಮಾರನೇ ದಿನ ಚಂದ್ರಮಂಡಲೋತ್ಸವದಲ್ಲಿ ದೇವಿಯನ್ನು ತೇರಿನಲ್ಲಿ ಕುಳ್ಳಿರಿಸಿ ಮೆರವಣಿಗೆ ಮಾಡಲಾಗುತ್ತದೆ. ಮೂರನೇ ದಿನ ದೀಪಾವಳಿಯಂದು ದೇವರಿಗೆ ಪೂಜೆ ಸಲ್ಲಿಸಿ ಅದೇ ದಿನರಾತ್ರಿ ವಾಹನದಲ್ಲಿ ಉತ್ಸವ ನಡೆಸಲಾಗುತ್ತದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

39 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

12 hours ago