ಹಾಸನ

ಸಿಎಂ ಸಿದ್ದರಾಮಯ್ಯ ವಿರುದ್ಧ ಸಕಲೇಶಪುರ ಜನತೆ ಆಕ್ರೋಶ: ಕಾರಣ ಇಷ್ಟೆ

ಸಕಲೇಶಪುರ: ಭಾರೀ ಮಳೆಯಿಂದ ಅನೇಕ ತೊಂದರೆಗಳನ್ನು ಎದುರಿಸುತ್ತಿರುವ ಹಾಸನ ಜಿಲ್ಲೆ ಸಕಲೇಶಪುರ ಜನತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರೀ ಮಳೆ ಸುರಿದ ಪರಿಣಾಮ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದ ಮನೆಯಲ್ಲೇ ಲಾಕ್‌ ಆಗಿರುವ ಕೆಲ ಪ್ರದೇಶಗಳ ಜನರು ಅಗತ್ಯ ವಸ್ತುಗಳ ಖರೀದಿಗೆ ತೀವ್ರ ಕಷ್ಟ ಅನುಭವಿಸುತ್ತಿದ್ದಾರೆ.

ಗುಡ್ಡ ಕುಸಿತ ವರದಿಯಾದ ಬಳಿಕ ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯ ಅವರು, ಸಕಲೇಶಪುರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ತೆರಳಿದ್ದರು. ಆದರೆ ಸಮಸ್ಯೆ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯ ಯಾವುದೇ ಭರವಸೆ ನೀಡದೇ ಹೋಗಿದ್ದರು.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರ ನಡೆ ಜನರ ಅಸಮಾಧಾನಕ್ಕೆ ಕಾರಣವಾಗಿದ್ದು, ಸಿಎಂ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸ್ಥಳೀಯರು ನಿರೀಕ್ಷೆ ಮಾಡಿದ್ದ ಸ್ಪಂದನೆ ಸಿಎಂ ಸಿದ್ದರಾಮಯ್ಯರಿಂದ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಜನತೆ ಕಿಡಿಕಾರಿದ್ದು, ಆದಷ್ಟು ಬೇಗ ಮೂಲಭೂತ ಸೌಕರ್ಯದ ಜೊತೆ ಜೊತೆಗೆ ಗುಡ್ಡ ಕುಸಿತ ಸಂಭವಿಸದ ಹಾಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

4 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

8 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

8 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

9 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

9 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

9 hours ago