ಹಾಸನ : ಪ್ರಸಿದ್ದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದರು.
ಮೊದಲ ಬಾರಿಗೆ ಹಾಸನಾಂಬೆಯ ದರ್ಶನ ಪಡೆದ ಸಿಎಂಗೆ ಸಂಪುಟ ಸಹೋದ್ಯೋಗಳು ಸಾಥ್ ನೀಡಿದರು.
ಬಳಿಕ ಮಾತನಾಡಿದ ಸಿಎಂ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಸನಾಂಬೆಯ ಜಾತ್ರೆ ನಡೆಯುತ್ತಿದೆ ನೀವು ಬರಬೇಕು ಎಂದಿದ್ದರು. ಹಾಗಾಗಿ ನಾನು ಬಂದು ದೇವಿಯ ಆಶಿರ್ವಾದ ಪಡೆದೆ. ಹಾಸನಾಂಬೆ ಬಹಳ ಇತಿಹಾಸವುಳ್ಳ ದೇವಿ. ಈ ಬಾರಿ ರಾಜಣ್ಣ ನೇತೃತ್ವದಲ್ಲಿ ಜಾತ್ರೆ ಬಹಳ ಅಚ್ಚು ಕಟ್ಟಾಗಿ ನಡೆಯುತ್ತಿದೆ ಎಂದರು.
ಕೇಂದ್ರದಿಂದ ಬರ ಪರಿಹಾರ ಬರುವ ಬಗ್ಗೆ ಮಾತನಾಡಿದ ಸಿಎಂ, ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಬಂದು ಹೋಗಿ 20 ದಿನ ಕಳೆಯಿತು. ಅವರು ವರದಿ ಕೊಟ್ಟರೂ ಕೇಂದ್ರ ಸರ್ಕಾರ ಗೈಡ್ಲೈನ್ ಪ್ರಕಾರ ಹಣ ಬಿಡುಗಡೆ ಮಾಡಿಲ್ಲ. ನಾವು ಎನ್ಡಿಆರ್ಎಫ್ ನಿಯಮದಡಿ 17,900 ಕೋಟಿ ರೂಪಾಯಿ ಹಣ ಕೇಳಿದ್ದೇವೆ. ನಮ್ಮ ರಾಜ್ಯದಿಂದ ಲಕ್ಷ ಲಕ್ಷ ತೆರಿಗೆ ಕೇಂದ್ರಕ್ಕೆ ಸಂದಾಯವಾಗ್ತಿದೆ. ಹಾಗಾಗಿ ನಮ್ಮ ಹಣ ನಾವು ಕೇಳಿದ್ದೇವೆ ಎಂದರು.
ನಾವು ಕೇಂದ್ರದೊಂದಿಗೆ ಜಗಳ ಮಾಡ್ತಿಲ್ಲ. ನಮ್ಮ ಸಚಿವರು ಹೋಗಿ ಕೇಂದ್ರ ಸಚಿವರನ್ನು ಭೇಟಿಯಾಗೋಣ ಎಂದರೆ ಅವರ ಸಮಯ ಕೊಡುತ್ತಿಲ್ಲ. ವಿಪಕ್ಷದವರು ನಾವು ಜಗಳ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ನಾವೇನು ಮಾಡ್ಲಿ. ಹಾಸನಾಂಬೆ ಎಲ್ಲರಿಗೂ ಒಳ್ಳೇದು ಮಾಡಲಿ ಎಂದು ಹೇಳಿದರು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…