ಹಾಸನ : ಪ್ರಸಿದ್ದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದರು.
ಮೊದಲ ಬಾರಿಗೆ ಹಾಸನಾಂಬೆಯ ದರ್ಶನ ಪಡೆದ ಸಿಎಂಗೆ ಸಂಪುಟ ಸಹೋದ್ಯೋಗಳು ಸಾಥ್ ನೀಡಿದರು.
ಬಳಿಕ ಮಾತನಾಡಿದ ಸಿಎಂ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಸನಾಂಬೆಯ ಜಾತ್ರೆ ನಡೆಯುತ್ತಿದೆ ನೀವು ಬರಬೇಕು ಎಂದಿದ್ದರು. ಹಾಗಾಗಿ ನಾನು ಬಂದು ದೇವಿಯ ಆಶಿರ್ವಾದ ಪಡೆದೆ. ಹಾಸನಾಂಬೆ ಬಹಳ ಇತಿಹಾಸವುಳ್ಳ ದೇವಿ. ಈ ಬಾರಿ ರಾಜಣ್ಣ ನೇತೃತ್ವದಲ್ಲಿ ಜಾತ್ರೆ ಬಹಳ ಅಚ್ಚು ಕಟ್ಟಾಗಿ ನಡೆಯುತ್ತಿದೆ ಎಂದರು.
ಕೇಂದ್ರದಿಂದ ಬರ ಪರಿಹಾರ ಬರುವ ಬಗ್ಗೆ ಮಾತನಾಡಿದ ಸಿಎಂ, ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಬಂದು ಹೋಗಿ 20 ದಿನ ಕಳೆಯಿತು. ಅವರು ವರದಿ ಕೊಟ್ಟರೂ ಕೇಂದ್ರ ಸರ್ಕಾರ ಗೈಡ್ಲೈನ್ ಪ್ರಕಾರ ಹಣ ಬಿಡುಗಡೆ ಮಾಡಿಲ್ಲ. ನಾವು ಎನ್ಡಿಆರ್ಎಫ್ ನಿಯಮದಡಿ 17,900 ಕೋಟಿ ರೂಪಾಯಿ ಹಣ ಕೇಳಿದ್ದೇವೆ. ನಮ್ಮ ರಾಜ್ಯದಿಂದ ಲಕ್ಷ ಲಕ್ಷ ತೆರಿಗೆ ಕೇಂದ್ರಕ್ಕೆ ಸಂದಾಯವಾಗ್ತಿದೆ. ಹಾಗಾಗಿ ನಮ್ಮ ಹಣ ನಾವು ಕೇಳಿದ್ದೇವೆ ಎಂದರು.
ನಾವು ಕೇಂದ್ರದೊಂದಿಗೆ ಜಗಳ ಮಾಡ್ತಿಲ್ಲ. ನಮ್ಮ ಸಚಿವರು ಹೋಗಿ ಕೇಂದ್ರ ಸಚಿವರನ್ನು ಭೇಟಿಯಾಗೋಣ ಎಂದರೆ ಅವರ ಸಮಯ ಕೊಡುತ್ತಿಲ್ಲ. ವಿಪಕ್ಷದವರು ನಾವು ಜಗಳ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ನಾವೇನು ಮಾಡ್ಲಿ. ಹಾಸನಾಂಬೆ ಎಲ್ಲರಿಗೂ ಒಳ್ಳೇದು ಮಾಡಲಿ ಎಂದು ಹೇಳಿದರು.
ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…
ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…
ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…
ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…
ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…
ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…