ಹಾಸನ : ಪ್ರಸಿದ್ದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದರು.
ಮೊದಲ ಬಾರಿಗೆ ಹಾಸನಾಂಬೆಯ ದರ್ಶನ ಪಡೆದ ಸಿಎಂಗೆ ಸಂಪುಟ ಸಹೋದ್ಯೋಗಳು ಸಾಥ್ ನೀಡಿದರು.
ಬಳಿಕ ಮಾತನಾಡಿದ ಸಿಎಂ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಸನಾಂಬೆಯ ಜಾತ್ರೆ ನಡೆಯುತ್ತಿದೆ ನೀವು ಬರಬೇಕು ಎಂದಿದ್ದರು. ಹಾಗಾಗಿ ನಾನು ಬಂದು ದೇವಿಯ ಆಶಿರ್ವಾದ ಪಡೆದೆ. ಹಾಸನಾಂಬೆ ಬಹಳ ಇತಿಹಾಸವುಳ್ಳ ದೇವಿ. ಈ ಬಾರಿ ರಾಜಣ್ಣ ನೇತೃತ್ವದಲ್ಲಿ ಜಾತ್ರೆ ಬಹಳ ಅಚ್ಚು ಕಟ್ಟಾಗಿ ನಡೆಯುತ್ತಿದೆ ಎಂದರು.
ಕೇಂದ್ರದಿಂದ ಬರ ಪರಿಹಾರ ಬರುವ ಬಗ್ಗೆ ಮಾತನಾಡಿದ ಸಿಎಂ, ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಬಂದು ಹೋಗಿ 20 ದಿನ ಕಳೆಯಿತು. ಅವರು ವರದಿ ಕೊಟ್ಟರೂ ಕೇಂದ್ರ ಸರ್ಕಾರ ಗೈಡ್ಲೈನ್ ಪ್ರಕಾರ ಹಣ ಬಿಡುಗಡೆ ಮಾಡಿಲ್ಲ. ನಾವು ಎನ್ಡಿಆರ್ಎಫ್ ನಿಯಮದಡಿ 17,900 ಕೋಟಿ ರೂಪಾಯಿ ಹಣ ಕೇಳಿದ್ದೇವೆ. ನಮ್ಮ ರಾಜ್ಯದಿಂದ ಲಕ್ಷ ಲಕ್ಷ ತೆರಿಗೆ ಕೇಂದ್ರಕ್ಕೆ ಸಂದಾಯವಾಗ್ತಿದೆ. ಹಾಗಾಗಿ ನಮ್ಮ ಹಣ ನಾವು ಕೇಳಿದ್ದೇವೆ ಎಂದರು.
ನಾವು ಕೇಂದ್ರದೊಂದಿಗೆ ಜಗಳ ಮಾಡ್ತಿಲ್ಲ. ನಮ್ಮ ಸಚಿವರು ಹೋಗಿ ಕೇಂದ್ರ ಸಚಿವರನ್ನು ಭೇಟಿಯಾಗೋಣ ಎಂದರೆ ಅವರ ಸಮಯ ಕೊಡುತ್ತಿಲ್ಲ. ವಿಪಕ್ಷದವರು ನಾವು ಜಗಳ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ನಾವೇನು ಮಾಡ್ಲಿ. ಹಾಸನಾಂಬೆ ಎಲ್ಲರಿಗೂ ಒಳ್ಳೇದು ಮಾಡಲಿ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…