ಹಾಸನ : ಪ್ರಸಿದ್ದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದರು.
ಮೊದಲ ಬಾರಿಗೆ ಹಾಸನಾಂಬೆಯ ದರ್ಶನ ಪಡೆದ ಸಿಎಂಗೆ ಸಂಪುಟ ಸಹೋದ್ಯೋಗಳು ಸಾಥ್ ನೀಡಿದರು.
ಬಳಿಕ ಮಾತನಾಡಿದ ಸಿಎಂ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಸನಾಂಬೆಯ ಜಾತ್ರೆ ನಡೆಯುತ್ತಿದೆ ನೀವು ಬರಬೇಕು ಎಂದಿದ್ದರು. ಹಾಗಾಗಿ ನಾನು ಬಂದು ದೇವಿಯ ಆಶಿರ್ವಾದ ಪಡೆದೆ. ಹಾಸನಾಂಬೆ ಬಹಳ ಇತಿಹಾಸವುಳ್ಳ ದೇವಿ. ಈ ಬಾರಿ ರಾಜಣ್ಣ ನೇತೃತ್ವದಲ್ಲಿ ಜಾತ್ರೆ ಬಹಳ ಅಚ್ಚು ಕಟ್ಟಾಗಿ ನಡೆಯುತ್ತಿದೆ ಎಂದರು.
ಕೇಂದ್ರದಿಂದ ಬರ ಪರಿಹಾರ ಬರುವ ಬಗ್ಗೆ ಮಾತನಾಡಿದ ಸಿಎಂ, ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಬಂದು ಹೋಗಿ 20 ದಿನ ಕಳೆಯಿತು. ಅವರು ವರದಿ ಕೊಟ್ಟರೂ ಕೇಂದ್ರ ಸರ್ಕಾರ ಗೈಡ್ಲೈನ್ ಪ್ರಕಾರ ಹಣ ಬಿಡುಗಡೆ ಮಾಡಿಲ್ಲ. ನಾವು ಎನ್ಡಿಆರ್ಎಫ್ ನಿಯಮದಡಿ 17,900 ಕೋಟಿ ರೂಪಾಯಿ ಹಣ ಕೇಳಿದ್ದೇವೆ. ನಮ್ಮ ರಾಜ್ಯದಿಂದ ಲಕ್ಷ ಲಕ್ಷ ತೆರಿಗೆ ಕೇಂದ್ರಕ್ಕೆ ಸಂದಾಯವಾಗ್ತಿದೆ. ಹಾಗಾಗಿ ನಮ್ಮ ಹಣ ನಾವು ಕೇಳಿದ್ದೇವೆ ಎಂದರು.
ನಾವು ಕೇಂದ್ರದೊಂದಿಗೆ ಜಗಳ ಮಾಡ್ತಿಲ್ಲ. ನಮ್ಮ ಸಚಿವರು ಹೋಗಿ ಕೇಂದ್ರ ಸಚಿವರನ್ನು ಭೇಟಿಯಾಗೋಣ ಎಂದರೆ ಅವರ ಸಮಯ ಕೊಡುತ್ತಿಲ್ಲ. ವಿಪಕ್ಷದವರು ನಾವು ಜಗಳ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ನಾವೇನು ಮಾಡ್ಲಿ. ಹಾಸನಾಂಬೆ ಎಲ್ಲರಿಗೂ ಒಳ್ಳೇದು ಮಾಡಲಿ ಎಂದು ಹೇಳಿದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…