ಹಾಸನ : ಪ್ರಸಿದ್ದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದರು.
ಮೊದಲ ಬಾರಿಗೆ ಹಾಸನಾಂಬೆಯ ದರ್ಶನ ಪಡೆದ ಸಿಎಂಗೆ ಸಂಪುಟ ಸಹೋದ್ಯೋಗಳು ಸಾಥ್ ನೀಡಿದರು.
ಬಳಿಕ ಮಾತನಾಡಿದ ಸಿಎಂ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಸನಾಂಬೆಯ ಜಾತ್ರೆ ನಡೆಯುತ್ತಿದೆ ನೀವು ಬರಬೇಕು ಎಂದಿದ್ದರು. ಹಾಗಾಗಿ ನಾನು ಬಂದು ದೇವಿಯ ಆಶಿರ್ವಾದ ಪಡೆದೆ. ಹಾಸನಾಂಬೆ ಬಹಳ ಇತಿಹಾಸವುಳ್ಳ ದೇವಿ. ಈ ಬಾರಿ ರಾಜಣ್ಣ ನೇತೃತ್ವದಲ್ಲಿ ಜಾತ್ರೆ ಬಹಳ ಅಚ್ಚು ಕಟ್ಟಾಗಿ ನಡೆಯುತ್ತಿದೆ ಎಂದರು.
ಕೇಂದ್ರದಿಂದ ಬರ ಪರಿಹಾರ ಬರುವ ಬಗ್ಗೆ ಮಾತನಾಡಿದ ಸಿಎಂ, ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಬಂದು ಹೋಗಿ 20 ದಿನ ಕಳೆಯಿತು. ಅವರು ವರದಿ ಕೊಟ್ಟರೂ ಕೇಂದ್ರ ಸರ್ಕಾರ ಗೈಡ್ಲೈನ್ ಪ್ರಕಾರ ಹಣ ಬಿಡುಗಡೆ ಮಾಡಿಲ್ಲ. ನಾವು ಎನ್ಡಿಆರ್ಎಫ್ ನಿಯಮದಡಿ 17,900 ಕೋಟಿ ರೂಪಾಯಿ ಹಣ ಕೇಳಿದ್ದೇವೆ. ನಮ್ಮ ರಾಜ್ಯದಿಂದ ಲಕ್ಷ ಲಕ್ಷ ತೆರಿಗೆ ಕೇಂದ್ರಕ್ಕೆ ಸಂದಾಯವಾಗ್ತಿದೆ. ಹಾಗಾಗಿ ನಮ್ಮ ಹಣ ನಾವು ಕೇಳಿದ್ದೇವೆ ಎಂದರು.
ನಾವು ಕೇಂದ್ರದೊಂದಿಗೆ ಜಗಳ ಮಾಡ್ತಿಲ್ಲ. ನಮ್ಮ ಸಚಿವರು ಹೋಗಿ ಕೇಂದ್ರ ಸಚಿವರನ್ನು ಭೇಟಿಯಾಗೋಣ ಎಂದರೆ ಅವರ ಸಮಯ ಕೊಡುತ್ತಿಲ್ಲ. ವಿಪಕ್ಷದವರು ನಾವು ಜಗಳ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ನಾವೇನು ಮಾಡ್ಲಿ. ಹಾಸನಾಂಬೆ ಎಲ್ಲರಿಗೂ ಒಳ್ಳೇದು ಮಾಡಲಿ ಎಂದು ಹೇಳಿದರು.
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…