ಬೆಂಗಳೂರು: ಜೆಡಿಎಸ್ ಪ್ರಾಬಲ್ಯವಿರುವ ಹಾಸನ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದಾರೆ.
ಮುಂದಿನ ತಿಂಗಳ ಡಿಸೆಂಬರ್.5ರಂದು ಮೆಗಾ ರ್ಯಾಲಿ ನಡೆಸಲು ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ಹಾಸನದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಿ.ಪರಮೇಶ್ವರ್ ಅವರು, ಬಲವಾದ ಸಂದೇಶ ರವಾನಿಸಲು ಹಾಸನದಲ್ಲಿ ರಾಜಕೀಯ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ತುಮಕೂರಿನಲ್ಲಿ ಡಿಸೆಂಬರ್.2ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ರ್ಯಾಲಿ ನಡೆಯಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನತೆಗೆ ಮತ್ತಷ್ಟು ಮನವರಿಕೆ ಮಾಡಿಕೊಡಲಾಗುತ್ತದೆ.
ಈ ಸಮಾವೇಶದ ಮೂಲಕ ವಿರೋಧ ಪಕ್ಷಗಳಿಗೆ ರಾಜ್ಯ ಸಚಿವರು ಟಕ್ಕರ್ ಕೊಡಲಿದ್ದು, ಅಂದಿನ ಸಮಾವೇಶಕ್ಕೆ ಐದು ಜಿಲ್ಲೆಯ ಜನರು ಸೇರುವ ನಿರೀಕ್ಷೆಯಿದೆ ಎನ್ನಲಾಗಿದೆ.
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…