ಬೆಂಗಳೂರು: ಜೆಡಿಎಸ್ ಪ್ರಾಬಲ್ಯವಿರುವ ಹಾಸನ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದಾರೆ.
ಮುಂದಿನ ತಿಂಗಳ ಡಿಸೆಂಬರ್.5ರಂದು ಮೆಗಾ ರ್ಯಾಲಿ ನಡೆಸಲು ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ಹಾಸನದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಿ.ಪರಮೇಶ್ವರ್ ಅವರು, ಬಲವಾದ ಸಂದೇಶ ರವಾನಿಸಲು ಹಾಸನದಲ್ಲಿ ರಾಜಕೀಯ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ತುಮಕೂರಿನಲ್ಲಿ ಡಿಸೆಂಬರ್.2ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ರ್ಯಾಲಿ ನಡೆಯಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನತೆಗೆ ಮತ್ತಷ್ಟು ಮನವರಿಕೆ ಮಾಡಿಕೊಡಲಾಗುತ್ತದೆ.
ಈ ಸಮಾವೇಶದ ಮೂಲಕ ವಿರೋಧ ಪಕ್ಷಗಳಿಗೆ ರಾಜ್ಯ ಸಚಿವರು ಟಕ್ಕರ್ ಕೊಡಲಿದ್ದು, ಅಂದಿನ ಸಮಾವೇಶಕ್ಕೆ ಐದು ಜಿಲ್ಲೆಯ ಜನರು ಸೇರುವ ನಿರೀಕ್ಷೆಯಿದೆ ಎನ್ನಲಾಗಿದೆ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…