ಬೆಂಗಳೂರು: ಜೆಡಿಎಸ್ ಪ್ರಾಬಲ್ಯವಿರುವ ಹಾಸನ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದಾರೆ.
ಮುಂದಿನ ತಿಂಗಳ ಡಿಸೆಂಬರ್.5ರಂದು ಮೆಗಾ ರ್ಯಾಲಿ ನಡೆಸಲು ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ಹಾಸನದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಿ.ಪರಮೇಶ್ವರ್ ಅವರು, ಬಲವಾದ ಸಂದೇಶ ರವಾನಿಸಲು ಹಾಸನದಲ್ಲಿ ರಾಜಕೀಯ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ತುಮಕೂರಿನಲ್ಲಿ ಡಿಸೆಂಬರ್.2ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ರ್ಯಾಲಿ ನಡೆಯಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನತೆಗೆ ಮತ್ತಷ್ಟು ಮನವರಿಕೆ ಮಾಡಿಕೊಡಲಾಗುತ್ತದೆ.
ಈ ಸಮಾವೇಶದ ಮೂಲಕ ವಿರೋಧ ಪಕ್ಷಗಳಿಗೆ ರಾಜ್ಯ ಸಚಿವರು ಟಕ್ಕರ್ ಕೊಡಲಿದ್ದು, ಅಂದಿನ ಸಮಾವೇಶಕ್ಕೆ ಐದು ಜಿಲ್ಲೆಯ ಜನರು ಸೇರುವ ನಿರೀಕ್ಷೆಯಿದೆ ಎನ್ನಲಾಗಿದೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…