ಹಾಸನ : ಕಾಡಾನೆ ಕಾರ್ಯಾಚರಣೆ ವೇಳೆ ವೀರ ಮರಣ ಹೊಂದಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದ್ದು, ಲಕ್ಷಾಂತರ ಅಭಿಮಾನಿಗಳ ಕನಸು ನನಸಾಗುತ್ತಿದೆ.
೨೦೨೩ರ ಡಿಸೆಂಬರ್ ೪ ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕನ್ನಡದ ಕಂದ ಅರ್ಜುನ ಸಾವನ್ನಪ್ಪಿದ್ದ. ಸಕಲೇಶಪುರ ತಾಲೂಕಿನ ಯಸಳೂರು ಅರಣ್ಯದ ದಬ್ಬಳ್ಳಿಕಟ್ಟೆಯ ನೆಡುತೋಪಿನ ಬಳಿ ಸಮಾಧಿ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಇಡೀ ಕರುನಾಡೇ ಅರ್ಜುನನ ಸಾವಿಗೆ ಕಂಬನಿ ಮಿಡಿದಿತ್ತು.
ಇನ್ನು ಅರ್ಜುನ ಸಮಾಧಿ ಬಳಿ ಹೋಗಲು ಸಮರ್ಪಕವಾದ ರಸ್ತೆ ಇಲ್ಲ. ಮಳೆ ಬಂದರೆ ಸಾಕು ಅರ್ಜುನನ ಸಮಾಧಿ ಕೆಸರು ಗದ್ದೆಯಂತಾಗುತ್ತಿದೆ. ಕೂಡಲೇ ಇಲ್ಲಿ ಮೂಲ ಸೌಕರ್ಯಗಳನ್ನ ಒದಗಿಸಬೇಕು, ಅರ್ಜುನನ ಸಮಾಧಿ ಬಳಿ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಅರ್ಜುನ ಆನೆ ಅಭಿಮಾನಿಗಳು ಒತ್ತಾಯ ಮಾಡಿದ್ದರು.
ಅದರಂತೆ ಇದೀಗ ಸರ್ಕಾರ ಕೂಡ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಇದಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಈ ಮೂಲಕವಾಗಿ ಲಕ್ಷಾಂತರ ಅರ್ಜುನನ ಅಭಿಮಾನಿಗಳ ಕನಸು ಈಡೇರುತ್ತಿದೆ.
ಅರ್ಜುನ ಆನೆಯನ್ನ ೧೯೬೮ ರಲ್ಲಿ ಕಾಕನಕೋಟೆಯ ಕಾಡುಗಳಿಂದ ಖೆಡ್ಡಾ ಕಾರ್ಯಾಚರಣೆಯಲ್ಲಿ ಆತನನ್ನ ಸೆರೆಯಿಡಿಯಲಾಗಿತ್ತು. ನಂತರ ಆತನನ್ನ ಪಳಗಿಸಿದ ಬಳಿಕ ೧೯೯೦ರ ದಶಕದಲ್ಲಿ ಮೈಸೂರಿನ ದಸರಾ ಉತ್ಸವದ ಸಂದರ್ಭದಲ್ಲಿ ಮೆರವಣಿಗೆಯನ್ನ ಒಳಗೊಂಡ ಶಿಬಿರಗಳಲ್ಲಿ ಬಳಸಿಕೊಳ್ಳಲಾಯಿತು. ನಂತರ ಅಂಬಾರಿ ಹೊರುವ ಜವಾಬ್ದಾರಿಯನ್ನ ತೆಗೆದುಕೊಂಡು ಅಂಬಾರಿಯನ್ನ ಹೊತ್ತು ಗಜಗಾಂಭೀರ್ಯದ ಹೆಜ್ಜೆ ಹಾಕಿ ಯಶಸ್ವಿ ದಸರಾ ನಡೆಸಿಕೊಟ್ಟಿದ್ದಾನೆ.
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…