ಹಾಸನ : ಕಾಡಾನೆ ಕಾರ್ಯಾಚರಣೆ ವೇಳೆ ವೀರ ಮರಣ ಹೊಂದಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದ್ದು, ಲಕ್ಷಾಂತರ ಅಭಿಮಾನಿಗಳ ಕನಸು ನನಸಾಗುತ್ತಿದೆ.
೨೦೨೩ರ ಡಿಸೆಂಬರ್ ೪ ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕನ್ನಡದ ಕಂದ ಅರ್ಜುನ ಸಾವನ್ನಪ್ಪಿದ್ದ. ಸಕಲೇಶಪುರ ತಾಲೂಕಿನ ಯಸಳೂರು ಅರಣ್ಯದ ದಬ್ಬಳ್ಳಿಕಟ್ಟೆಯ ನೆಡುತೋಪಿನ ಬಳಿ ಸಮಾಧಿ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಇಡೀ ಕರುನಾಡೇ ಅರ್ಜುನನ ಸಾವಿಗೆ ಕಂಬನಿ ಮಿಡಿದಿತ್ತು.
ಇನ್ನು ಅರ್ಜುನ ಸಮಾಧಿ ಬಳಿ ಹೋಗಲು ಸಮರ್ಪಕವಾದ ರಸ್ತೆ ಇಲ್ಲ. ಮಳೆ ಬಂದರೆ ಸಾಕು ಅರ್ಜುನನ ಸಮಾಧಿ ಕೆಸರು ಗದ್ದೆಯಂತಾಗುತ್ತಿದೆ. ಕೂಡಲೇ ಇಲ್ಲಿ ಮೂಲ ಸೌಕರ್ಯಗಳನ್ನ ಒದಗಿಸಬೇಕು, ಅರ್ಜುನನ ಸಮಾಧಿ ಬಳಿ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಅರ್ಜುನ ಆನೆ ಅಭಿಮಾನಿಗಳು ಒತ್ತಾಯ ಮಾಡಿದ್ದರು.
ಅದರಂತೆ ಇದೀಗ ಸರ್ಕಾರ ಕೂಡ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಇದಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಈ ಮೂಲಕವಾಗಿ ಲಕ್ಷಾಂತರ ಅರ್ಜುನನ ಅಭಿಮಾನಿಗಳ ಕನಸು ಈಡೇರುತ್ತಿದೆ.
ಅರ್ಜುನ ಆನೆಯನ್ನ ೧೯೬೮ ರಲ್ಲಿ ಕಾಕನಕೋಟೆಯ ಕಾಡುಗಳಿಂದ ಖೆಡ್ಡಾ ಕಾರ್ಯಾಚರಣೆಯಲ್ಲಿ ಆತನನ್ನ ಸೆರೆಯಿಡಿಯಲಾಗಿತ್ತು. ನಂತರ ಆತನನ್ನ ಪಳಗಿಸಿದ ಬಳಿಕ ೧೯೯೦ರ ದಶಕದಲ್ಲಿ ಮೈಸೂರಿನ ದಸರಾ ಉತ್ಸವದ ಸಂದರ್ಭದಲ್ಲಿ ಮೆರವಣಿಗೆಯನ್ನ ಒಳಗೊಂಡ ಶಿಬಿರಗಳಲ್ಲಿ ಬಳಸಿಕೊಳ್ಳಲಾಯಿತು. ನಂತರ ಅಂಬಾರಿ ಹೊರುವ ಜವಾಬ್ದಾರಿಯನ್ನ ತೆಗೆದುಕೊಂಡು ಅಂಬಾರಿಯನ್ನ ಹೊತ್ತು ಗಜಗಾಂಭೀರ್ಯದ ಹೆಜ್ಜೆ ಹಾಕಿ ಯಶಸ್ವಿ ದಸರಾ ನಡೆಸಿಕೊಟ್ಟಿದ್ದಾನೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…