ಹಾಸನ: ಸಿಆರ್ಪಿಎಫ್ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.
ರವಿಶಂಕರ್ ಎಂಬುವವರೇ ಮೃತ ಯೋಧರಾಗಿದ್ದಾರೆ. ಯೋಧನ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಆರೋಪಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದ ಯೋಧ ರವಿಶಂಕರ್ ಅವರ ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿಯಿತ್ತು.
ಹೊಳೆನರಸೀಪುರಕ್ಕೆ ಬಂದಿದ್ದ ಯೋಧ ರವಿಶಂಕರ್ ಅವರಿಗೆ ಜ್ವರ, ಸುಸ್ತು, ಉಸಿರಾಟದ ತೊಂದರೆ ಸಮಸ್ಯೆ ಕಾಣಿಸಿಕೊಂಡಿದೆ.
ಕೂಡಲೇ ಅವರನ್ನು ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಸರಿಯಾಗಿ ತಪಾಸಣೆ ಮಾಡದೇ ಕೇವಲ ಮಾತ್ರೆ ನೀಡಿ ಕಳುಹಿಸಿದ್ದರು ಎನ್ನಲಾಗಿದೆ.
ಮನೆಗೆ ತೆರಳುತ್ತಿದ್ದಂತೆ ಯೋಧ ರವಿಶಂಕರ್ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರವಿಶಂಕರ್ ಸಾವಿಗೆ ವೈದ್ಯರೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿ ಮೃತ ಯೋಧನ ಶವವನ್ನು ಇರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…