ಹಾಸನ : ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದ್ದು, ಈ ಡೆಂಗ್ಯೂ ಗೆ ಮಕ್ಕಳೇ ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಡೆಂಗ್ಯೂ ಗೆ ಸಾವನ್ನಪ್ಪಿದವರ ಸಂಖ್ಯೆ ಕೂಡ ನಾಲ್ಕಕ್ಕೆ ಏರಿಕೆಯಾಗಿದೆ. ಎಂಟು ವರ್ಷದ ಬಾಲಕಿಯೊಬ್ಬಳು ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ್ದಾಳೆ.
ಹೊಳೆ ನರಸೀಪುರ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ರಮೇಶ್- ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿ ಮೃತ ಬಾಲಕಿಯಾಗಿದ್ದಾಳೆ. ಕಳೆದ ಮೂರ್ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ನೀಡಿದ್ದರು ಸಹ ಆರೋಗ್ಯ ಸುಧಾರಿಸಿದ ಕಾರಣ ಪೋಷಕರು ಆಕೆಯನ್ನ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಲ್ಲಿಯೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ತೀವ್ರ ಜ್ವರವಿದ್ದ ಕಾರಣ ಡೆಂಗ್ಯೂಯಿಂದ ಸಾವನ್ನಪ್ಪಿದ್ದಾಳೆ ಎಂದು ಅಂದಾಜಿಸಲಾಗಿದೆ. ಆದರೆ ವೈದ್ಯರು ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಬೇಕಾಗಿದೆ.
ಇನ್ನು ಹಿಮ್ಸ್ ನಲ್ಲಿ ೩೭ ಮಕ್ಕಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ೮ ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…