dharmastala hasan chalooo
ಹಾಸನ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ನಡೆಯುತ್ತಿರುವ ಬಿಜೆಪಿ ರ್ಯಾಲಿಗೆ ಹಾಸನದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.
ಬೃಹತ್ ರ್ಯಾಲಿಗೆ ಬೂವನಹಳ್ಳಿ ಬೈಪಾಸ್ನಲ್ಲಿ ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರು. ಸ್ವಾಗತ ಕೋರುತ್ತಿದ್ದಂತೆ ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂಬ ಘೋಷ ವಾಕ್ಯವನ್ನು ಕಾರ್ಯಕರ್ತರು ಕೂಗಿದ್ದಾರೆ. ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಈ ರ್ಯಾಲಿ ನಡೆಯುತ್ತಿದೆ. ರ್ಯಾಲಿಯಲ್ಲಿ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ರ್ಯಾಲಿಯಲ್ಲಿ ನೂರಾರು ಜನ ಭಗವಾಧ್ವಜ ಹಿಡಿದು ಕೇಸರಿ ಶಾಲು ಧರಿಸಿ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಮಧ್ಯಾಹ್ನ 3 ಗಂಟೆಗೆ ರ್ಯಾಲಿ ಧರ್ಮಸ್ಥಳ ತಲುಪಲಿದೆ. ಕಾರ್ಯಕರ್ತರು ದೇವರ ದರ್ಶನ ಪಡೆದು ಧರ್ಮಸ್ಥಳದಲ್ಲೇ ಇಂದು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಶಾಸಕರ ನಿಯೋಗವು ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಉಡುಪಿ, ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರು ನಿಯೋಗದಲ್ಲಿರುತ್ತಾರೆ. ಬಿಜೆಪಿ ನಾಯಕರು ಧರ್ಮಸ್ಥಳ ಧರ್ಮಾಧಿಕಾರಿಯನ್ನು ಭೇಟಿ ಮಾಡಿ ನೈತಿಕ ಬೆಂಬಲ ಸೂಚಿಸಲಿದ್ದಾರೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…