ಹಾಸನ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಸಕಲೇಶಪುರ ತಾಲ್ಲೂಕಿನ ಬ್ಯಾಕೆರೆಗಡಿ ಗ್ರಾಮದ ಧನ್ಯಶ್ರೀ ಎಂದು ಗುರುತಿಸಲಾಗಿದೆ.
ಕಳೆದ ಎರಡು ವರ್ಷದ ಹಿಂದೆ ಧನ್ಯಶ್ರೀ ಹಾಗೂ ಪ್ರೇಮ್ ಕುಮಾರ್ ಪ್ರೀತಿಸಿ ವಿವಾಹವಾಗಿದ್ದರು. ಮದುವೆ ಆದ ದಿನದಿಂದಲೂ ಪ್ರೇಮ್ಕುಮಾರ್ ಧನ್ಯಶ್ರೀಗೆ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ತವರು ಮನೆಗೆ ಹೋಗಿದ್ದ ಧನ್ಯಶ್ರೀ ಭಾನುವಾರ ಗಂಡನ ಮನೆಗೆ ವಾಪಸ್ ಬಂದಿದ್ದರು. ಈ ವೇಳೆ ಜಗಳ ಮಾಡಿ ಧನ್ಯಶ್ರೀ ಮೇಲೆ ಹಲ್ಲೆ ಮಾಡಿದ್ದ.
ಇದೇ ವೇಳೆ ಅತ್ತೆ ಭವಾನಿ, ಮಾವ ಪ್ರದೀಪ್ ಕೂಡ ಆಕೆಯ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…