ಹಾಸನ: ಖಾಸಗಿ ಫೈನಾನ್ಸ್ ಸಿಬ್ಬಂದಿ ಅಟ್ಟಹಾಸಕ್ಕೆ ವೃದ್ಧ ದಂಪತಿ ಬೀದಿಗೆ ಬಿದ್ದಿದ್ದು, ಸಾಲ ಕಟ್ಟಿಲ್ಲವೆಂದು ವೃದ್ಧ ದಂಪತಿಯನ್ನು ಫೈನಾನ್ಸ್ ಸಿಬ್ಬಂದಿ ಮನೆಯಿಂದ ಹೊರಗೆ ಹಾಕಿದ್ದಾರೆ.
ಖಾಸಗಿ ಫೈನಾನ್ಸ್ ಸಿಬ್ಬಂದಿ ದೌರ್ಜನ್ಯದಿಂದ ದಂಪತಿ ಬೀದಿಗೆ ಬಿದ್ದಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೊರಟಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ.
ಸಣ್ಣಯ್ಯ ಹಾಗೂ ಜಯಮ್ಮ ಅವರನ್ನು ಮನೆಯಿಂದ ಹೊರಹಾಕಿ ಬೀಗ ಹಾಕಲಾಗಿದೆ. ಕೋರ್ಟ್ ಆದೇಶವಿದೆ ಎಂದು ಮನೆಗೆ ಖಾಗಿ ಫೈನಾನ್ಸ್ ಸಿಬ್ಬಂದಿ ಬೀಗ ಹಾಕಿದ್ದಾರೆ.
ವೃದ್ಧ ದಂಪತಿಯ ಜಾನುವಾರು ಕೊಟ್ಟಿಗೆಗೂ ಬೀಗ ಹಾಕಲಾಗಿದೆ. 2023ರಲ್ಲಿ ಮಗನ ಕ್ಯಾನ್ಸರ್ ಚಿಕಿತ್ಸೆಗಾಗಿ ಮನೆ ಅಡಮಾನ ಬಿಟ್ಟು ದಂಪತಿ ಖಾಸಗಿ ಫೈನಾನ್ಸ್ನಿಂದ ಎರಡು ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಒಂದು ವರ್ಷ ಸಾಲದ ಕಂತುಗಳನ್ನು ಪಾವತಿಸಿದ್ದರು.
ಇತ್ತೀಚೆಗೆ ಸಾಲದ ಕಂತು ಕಟ್ಟಲು ಆಗಿರಲಿಲ್ಲ. ಅವರನ್ನು ಮನೆಯಿಂದ ಹೊರಗೆ ಹಾಕಿರುವುದರಿಂದ ಕೊರೆಯುವ ಚಳಿಯಲ್ಲಿ ಬೀದಿಯಲ್ಲಿಯೇ ದಂಪತಿ ವಾಸ ಮಾಡುತ್ತಿದ್ದು, ಒಂದು ವಾರದಿಂದ ಮನೆಯ ಹೊರಗೆ ದಂಪತಿ ವಾಸ ಮಾಡುತ್ತಿದ್ದಾರೆ.
ನಾವು ಸಾಲದ ಹಣ ತೀರಿಸುತ್ತೇವೆ ಸಮಯ ಕೊಡಿ ಎಂದು ಮನವಿ ಮಾಡಿದ್ದಾರೆ. ಫೈನಾನ್ಸ್ ಕಂಪನಿ ಸಿಬ್ಬಂದಿ ಅಮಾನವೀಯ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…