ಹಾಸನ

ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿ ಸಲಗ ಡೆಡ್ಲಿ ಅಟ್ಯಾಕ್‌

ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ.

ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ ಹೋಗಿ ಕಾರ್ಮಿಕ ಜೀವ ಉಳಿಸಿಕೊಂಡಿದ್ದಾನೆ.

ಆದರೆ, ಕಾರ್ಮಿಕ ಪುನಃ ಮೆಟ್ಟಿಲಿನಿಂದ ಇಳಿದು ಬರಬಹುದು ಎಂದು ಮನೆಯ ಮುಂದಿನ ಕಾಫಿ ತೋಟದಲ್ಲಿ ಒಂಟಿಸಲಗ ಸುಮಾರು ಹೊತ್ತು ಅಡಗಿ ಕುಳಿತು ಬೇಟೆಗಾಗಿ ಹುಲಿಯಂತೆ ಹೊಂಚು ಹಾಕಿತ್ತು. ಆನೆಯನ್ನು ಮನೆ ಮೇಲಿನಿಂದ ನೋಡುತ್ತಿದ್ದ ಕಾರ್ಮಿಕ ಆನೆ ಸಂಪೂರ್ಣವಾಗಿ ಹೋಗುವುದನ್ನು ಖಚಿತಪಡಿಸಿಕೊಂಡ ಬಳಿಕವೇ ಕೆಳಗೆ ಇಳಿದಿದ್ದಾನೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಭಾಗದಲ್ಲಿ ಕಾಡಾನೆಗಳು ಹಾಗೂ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಆನೆಗಳ ದಾಳಿಗೆ ಸಿಲುಕಿ ಸಾವನ್ನಪ್ಪುವವರ ಪ್ರಕರಣ ಹೆಚ್ಚಾಗುತ್ತಲೇ ಇದೆ. ಇಂದಿನ ಘಟನೆಯಿಂದ ಜನತೆ ಭಾರೀ ಭಯಭೀತರಾಗಿದ್ದು, ಕಾಡಾನೆಗಳ ದಾಳಿಯನ್ನು ತಪ್ಪಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

32 mins ago

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 10ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…

41 mins ago

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…

54 mins ago

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…

55 mins ago

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…

58 mins ago

ಓದುಗರ ಪತ್ರ: ಪುಸ್ತಕ ಉಡುಗೊರೆ ಸಂಸ್ಕೃತಿ ಬೆಳೆಸಿ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…

1 hour ago