ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ.
ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ ಹೋಗಿ ಕಾರ್ಮಿಕ ಜೀವ ಉಳಿಸಿಕೊಂಡಿದ್ದಾನೆ.
ಆದರೆ, ಕಾರ್ಮಿಕ ಪುನಃ ಮೆಟ್ಟಿಲಿನಿಂದ ಇಳಿದು ಬರಬಹುದು ಎಂದು ಮನೆಯ ಮುಂದಿನ ಕಾಫಿ ತೋಟದಲ್ಲಿ ಒಂಟಿಸಲಗ ಸುಮಾರು ಹೊತ್ತು ಅಡಗಿ ಕುಳಿತು ಬೇಟೆಗಾಗಿ ಹುಲಿಯಂತೆ ಹೊಂಚು ಹಾಕಿತ್ತು. ಆನೆಯನ್ನು ಮನೆ ಮೇಲಿನಿಂದ ನೋಡುತ್ತಿದ್ದ ಕಾರ್ಮಿಕ ಆನೆ ಸಂಪೂರ್ಣವಾಗಿ ಹೋಗುವುದನ್ನು ಖಚಿತಪಡಿಸಿಕೊಂಡ ಬಳಿಕವೇ ಕೆಳಗೆ ಇಳಿದಿದ್ದಾನೆ.
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಭಾಗದಲ್ಲಿ ಕಾಡಾನೆಗಳು ಹಾಗೂ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಆನೆಗಳ ದಾಳಿಗೆ ಸಿಲುಕಿ ಸಾವನ್ನಪ್ಪುವವರ ಪ್ರಕರಣ ಹೆಚ್ಚಾಗುತ್ತಲೇ ಇದೆ. ಇಂದಿನ ಘಟನೆಯಿಂದ ಜನತೆ ಭಾರೀ ಭಯಭೀತರಾಗಿದ್ದು, ಕಾಡಾನೆಗಳ ದಾಳಿಯನ್ನು ತಪ್ಪಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…
ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…