ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ.
ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ ಹೋಗಿ ಕಾರ್ಮಿಕ ಜೀವ ಉಳಿಸಿಕೊಂಡಿದ್ದಾನೆ.
ಆದರೆ, ಕಾರ್ಮಿಕ ಪುನಃ ಮೆಟ್ಟಿಲಿನಿಂದ ಇಳಿದು ಬರಬಹುದು ಎಂದು ಮನೆಯ ಮುಂದಿನ ಕಾಫಿ ತೋಟದಲ್ಲಿ ಒಂಟಿಸಲಗ ಸುಮಾರು ಹೊತ್ತು ಅಡಗಿ ಕುಳಿತು ಬೇಟೆಗಾಗಿ ಹುಲಿಯಂತೆ ಹೊಂಚು ಹಾಕಿತ್ತು. ಆನೆಯನ್ನು ಮನೆ ಮೇಲಿನಿಂದ ನೋಡುತ್ತಿದ್ದ ಕಾರ್ಮಿಕ ಆನೆ ಸಂಪೂರ್ಣವಾಗಿ ಹೋಗುವುದನ್ನು ಖಚಿತಪಡಿಸಿಕೊಂಡ ಬಳಿಕವೇ ಕೆಳಗೆ ಇಳಿದಿದ್ದಾನೆ.
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಭಾಗದಲ್ಲಿ ಕಾಡಾನೆಗಳು ಹಾಗೂ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಆನೆಗಳ ದಾಳಿಗೆ ಸಿಲುಕಿ ಸಾವನ್ನಪ್ಪುವವರ ಪ್ರಕರಣ ಹೆಚ್ಚಾಗುತ್ತಲೇ ಇದೆ. ಇಂದಿನ ಘಟನೆಯಿಂದ ಜನತೆ ಭಾರೀ ಭಯಭೀತರಾಗಿದ್ದು, ಕಾಡಾನೆಗಳ ದಾಳಿಯನ್ನು ತಪ್ಪಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…