ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ.
ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ ಹೋಗಿ ಕಾರ್ಮಿಕ ಜೀವ ಉಳಿಸಿಕೊಂಡಿದ್ದಾನೆ.
ಆದರೆ, ಕಾರ್ಮಿಕ ಪುನಃ ಮೆಟ್ಟಿಲಿನಿಂದ ಇಳಿದು ಬರಬಹುದು ಎಂದು ಮನೆಯ ಮುಂದಿನ ಕಾಫಿ ತೋಟದಲ್ಲಿ ಒಂಟಿಸಲಗ ಸುಮಾರು ಹೊತ್ತು ಅಡಗಿ ಕುಳಿತು ಬೇಟೆಗಾಗಿ ಹುಲಿಯಂತೆ ಹೊಂಚು ಹಾಕಿತ್ತು. ಆನೆಯನ್ನು ಮನೆ ಮೇಲಿನಿಂದ ನೋಡುತ್ತಿದ್ದ ಕಾರ್ಮಿಕ ಆನೆ ಸಂಪೂರ್ಣವಾಗಿ ಹೋಗುವುದನ್ನು ಖಚಿತಪಡಿಸಿಕೊಂಡ ಬಳಿಕವೇ ಕೆಳಗೆ ಇಳಿದಿದ್ದಾನೆ.
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಭಾಗದಲ್ಲಿ ಕಾಡಾನೆಗಳು ಹಾಗೂ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಆನೆಗಳ ದಾಳಿಗೆ ಸಿಲುಕಿ ಸಾವನ್ನಪ್ಪುವವರ ಪ್ರಕರಣ ಹೆಚ್ಚಾಗುತ್ತಲೇ ಇದೆ. ಇಂದಿನ ಘಟನೆಯಿಂದ ಜನತೆ ಭಾರೀ ಭಯಭೀತರಾಗಿದ್ದು, ಕಾಡಾನೆಗಳ ದಾಳಿಯನ್ನು ತಪ್ಪಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…