ಹಾಸನ

ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿ ಸಲಗ ಡೆಡ್ಲಿ ಅಟ್ಯಾಕ್‌

ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ.

ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ ಹೋಗಿ ಕಾರ್ಮಿಕ ಜೀವ ಉಳಿಸಿಕೊಂಡಿದ್ದಾನೆ.

ಆದರೆ, ಕಾರ್ಮಿಕ ಪುನಃ ಮೆಟ್ಟಿಲಿನಿಂದ ಇಳಿದು ಬರಬಹುದು ಎಂದು ಮನೆಯ ಮುಂದಿನ ಕಾಫಿ ತೋಟದಲ್ಲಿ ಒಂಟಿಸಲಗ ಸುಮಾರು ಹೊತ್ತು ಅಡಗಿ ಕುಳಿತು ಬೇಟೆಗಾಗಿ ಹುಲಿಯಂತೆ ಹೊಂಚು ಹಾಕಿತ್ತು. ಆನೆಯನ್ನು ಮನೆ ಮೇಲಿನಿಂದ ನೋಡುತ್ತಿದ್ದ ಕಾರ್ಮಿಕ ಆನೆ ಸಂಪೂರ್ಣವಾಗಿ ಹೋಗುವುದನ್ನು ಖಚಿತಪಡಿಸಿಕೊಂಡ ಬಳಿಕವೇ ಕೆಳಗೆ ಇಳಿದಿದ್ದಾನೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಭಾಗದಲ್ಲಿ ಕಾಡಾನೆಗಳು ಹಾಗೂ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಆನೆಗಳ ದಾಳಿಗೆ ಸಿಲುಕಿ ಸಾವನ್ನಪ್ಪುವವರ ಪ್ರಕರಣ ಹೆಚ್ಚಾಗುತ್ತಲೇ ಇದೆ. ಇಂದಿನ ಘಟನೆಯಿಂದ ಜನತೆ ಭಾರೀ ಭಯಭೀತರಾಗಿದ್ದು, ಕಾಡಾನೆಗಳ ದಾಳಿಯನ್ನು ತಪ್ಪಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

28 mins ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

1 hour ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

2 hours ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

6 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

9 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

9 hours ago