ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ರೈತರ ಜಮೀನುಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ.
ಇಂದು ಬೆಳ್ಳಂಬೆಳಿಗ್ಗೆಯೇ ಕಾಡಿನಿಂದ ನಾಡಿಗೆ ಎಂಟ್ರಿಕೊಟ್ಟಿದ್ದ ಕಾಡಾನೆಗಳು, ರೈತರ ಜಮೀನುಗಳಲ್ಲಿ ಬೆಳೆದಿದ್ದ ಶುಂಠಿ, ಬಾಳೆ, ತರಕಾರಿ ಸೇರಿದಂತೆ ಅಪಾರ ಪ್ರಮಾಣದ ಬೆಳೆಗಳನ್ನು ನಾಶ ಮಾಡಿವೆ.
ಇದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಬಳಸುತ್ತಿದ್ದ ಅನೇಕ ಉಪಕರಣಗಳು ಹಾಗೂ ಪೈಪ್ಗಳನ್ನು ತುಳಿದು ನಾಶಪಡಿಸಿವೆ.
ಬೆಳ್ಳಂಬೆಳಿಗ್ಗೆಯೇ ಕಾಡಾನೆಗಳನ್ನು ಕಂಡು ಗಾಬರಿಯಾದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.
ಬಳಿಕ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಕಾಡಿಗಟ್ಟಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಜನರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸೇರಿ ಆನೆಗಳನ್ನು ಕಾಡಿಗೆ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಈ ಭಾಗದಲ್ಲಿ ಪದೇ ಪದೇ ಆನೆಗಳ ಹಿಂಡು ದಾಳಿ ನಡೆಸುತ್ತಿದ್ದು, ಆನೆಗಳು ನಾಡಿಗೆ ಬರದಂತೆ ತಡೆಯಲು ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ ಎಂದು ರೈತರು ಕಿಡಿಕಾರಿದ್ದಾರೆ.
ಹೆಚ್ಚಿನ ಅನಾಹುತ ಆಗುವುದಕ್ಕೂ ಮುಂಚೆ ಆನೆಗಳು ನಾಡಿಗೆ ಬರದಂತೆ ತಡೆಯಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…