ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ.
ಇಂದು ಮಧ್ಯಾಹ್ನ ದೇಗುಲದ ಬಾಗಿಲನ್ನು ತೆರೆಯಲಾಗುವುದು ಎಂದು ದೇಗುಲದ ಅರ್ಚಕರು ಮಾಹಿತಿ ನೀಡಿದ್ದಾರೆ.
ನವೆಂಬರ್.3ರಂದು ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದ್ದು, ಹಾಸನಾಂಬ ಉತ್ಸವಕ್ಕೆ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯಲಿದೆ.
ಇನ್ನು ಕಳೆದ ಬಾರಿ 14 ಲಕ್ಷ ಮಂದಿ ಸಾರ್ವಜನಿಕರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಮಂದಿ ಬರುವ ನಿರೀಕ್ಷೆಯಲ್ಲಿದ್ದು, ಇದಕ್ಕಾಗಿ ತಯಾರಿ ಮಾಡಿಕೊಳ್ಳಲಾಗಿದೆ.
ವರ್ಷದಿಂದ ವರ್ಷಕ್ಕೆ ಹಲವು ವಿಶೇಷತೆಗಳನ್ನು ಒಳಗೊಂಡು ನಡೆಯುತ್ತಿರುವ ಹಾಸನಾಂಬೆ ದೇವಿ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ನಗರದಲ್ಲಿ ಮೈಸೂರು ದಸರಾ ಮಾದರಿಯ ಚಿತ್ತಾಕರ್ಷಕ ಲೈಟಿಂಗ್ಸ್ ಅಳವಡಿಕೆ ಮಾಡಲಾಗಿದೆ.
ಈ ವರ್ಷ ಕೇವಲ 9 ದಿನಗಳು ಮಾತ್ರ ದೇವಿಯ ದರ್ಶನಕ್ಕೆ ಅವಕಾಶ ಸಿಗಲಿದದ್ದು, ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…