ಹಾಸನ: ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಐದು ಹಸು, ಒಂದು ಕರು, ಹದಿನೈದು ಸಾವಿರ ಕೊಬ್ಬರಿ, ಹತ್ತು ಸಾವಿರ ತೆಂಗಿನಕಾಯಿ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹೆಂಜಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿವಣ್ಣ ಎಂಬುವವರಿಗೆ ಸೇರಿದ ತೋಟದ ಮನೆ ಇದಾಗಿದ್ದು, ಮನೆಯಲ್ಲಿ ದಾಸ್ತಾನು ಮಾಡಿದ್ದ ಸಾವಿರಾರು ಕೊಬ್ಬರಿ ಹಾಗೂ ತೆಂಗಿನಕಾಯಿಗಳು ಸುಟ್ಟು ಕರಕಲಾಗಿವೆ. ಕಳೆದ ತಡರಾತ್ರಿ ಶಿವಣ್ಣ ಅವರು, ಹಾಲು ಕರೆದು ಹಸುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿ ಜಾಜೂರಿನ ವಾಸದ ಮನೆಗೆ ಬಂದಿದ್ದರು. ಇಂದು ಬೆಳಿಗ್ಗೆ ಮತ್ತೆ ಹಾಲು ಕರೆಯಲು ಹೋದಾಗ ಹಸುಗಳು, ಕರು, ಕೊಬ್ಬರಿ ಹಾಗೂ ತೆಂಗಿನಕಾಯಿಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದವು. ಇದನ್ನು ಕಂಡು ಆಘಾತಗೊಂಡ ರೈತ ಶಿವಣ್ಣ ಹಾಗೂ ಕುಟುಂಬದವರ ರೋಧನೆ ಹೇಳತೀರದಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು, ರೈತ ಶಿವಣ್ಣ ಅವರಿಗೆ ಧೈರ್ಯ ತುಂಬಿ, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಈ ಸಂಬಂಧ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…