Mysore
25
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ಕೆಲ ದಿನಗಳಿಂದ ದಿಂಡನೂರು ಗ್ರಾಮದಲ್ಲಿ ಚಿರತೆಗಳು ಪದೇ ಪದೇ ದಾಳಿ ನಡೆಸಿ ಬೀದಿನಾಯಿಗಳು, ಮೇಕೆ, ಕುರಿಗಳನ್ನು ತಿಂದು ಹಾಕುತ್ತಿದ್ದವು.

ಚಿರತೆ ದಾಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರು ರಾತ್ರಿಯಾದರೆ ಸಾಕು ಮನೆಯಿಂದ ಹೊರಬರಲು ಭಯಪಡುತ್ತಿದ್ದರು.

ಬಳಿಕ ಅರಣ್ಯ ಇಲಾಖೆಗೆ ಮನವಿ ಮಾಡಿದ್ದ ಗ್ರಾಮಸ್ಥರು ಚಿರತೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು.

ಈ ಹಿನ್ನೆಲೆಯಲ್ಲಿ ಬೋನು ಅಳವಡಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ಚಿರತೆಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಭಾಗದಲ್ಲಿ ಮತ್ತಷ್ಟು ಚಿರತೆಗಳಿದ್ದು, ಅವುಗಳನ್ನು ಕೂಡ ಸೆರೆ ಹಿಡಿದು ಗ್ರಾಮಸ್ಥರ ಭಯ ದೂರವಾಗಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

 

 

Tags:
error: Content is protected !!