ಹಾಸನ

ಹಾಸನಾಂಬೆ ದರ್ಶನ ಪಡೆದ ಮಾಜಿ ಸಚಿವ ಎಚ್‌.ಡಿ.ರೇವಣ್ಣ

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಪತ್ನಿ ಭವಾನಿ ರೇವಣ್ಣ ಜೊತೆ ದೇವಾಲಯಕ್ಕೆ ಆಗಮಿಸಿದ ಎಚ್.ಡಿ.ರೇವಣ್ಣ ಹಾಸನಾಂಬೆ ದರ್ಶನ ಪಡೆದು ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.

ಇದನ್ನು ಓದಿ : ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ ; 2 ಕೋಟಿ ಆದಾಯ

ರೇವಣ್ಣ ಕಾರನ್ನು ತಡೆದ ಅಧಿಕಾರಿಗಳು: ಹಾಸನಾಂಬೆ ದರ್ಶನಕ್ಕೆ ಕಾರಿನಲ್ಲಿ ಆಗಮಿಸಿದ್ದ ರೇವಣ್ಣ ಅವರನ್ನು ಕಂದಾಯ ಇಲಾಖೆ ಅಧಿಕಾರಿಗಳು ತಡೆದ ಘಟನೆ ನಡೆಯಿತು. ಶಿಷ್ಟಾಚಾರ ಪಾಲನೆಗೆ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದೇ ಶಾಸಕ ರೇವಣ್ಣ ಹಾಸನಾಂಬೆ ದರ್ಶನಕ್ಕೆ ತಮ್ಮದೇ ಕಾರಿನಲ್ಲಿ ಭದ್ರತಾ ವ್ಯವಸ್ಥೆಗಳೊಂದಿಗೆ ಆಗಮಿಸಿದ್ದರು.

ಈ ವೇಳೆ ಕಂದಾಯ ಇಲಾಖೆ ಅಧಿಕಾರಿಗಳು ಶಾಸಕ ಎಚ್.ಡಿ.ರೇವಣ್ಣ ಕಾರನ್ನು ತಡೆದರು. ಈ ವೇಳೆ ರೇವಣ್ಣ ಅವರು ಅಧಿಕಾರಿಗಳ ವಿರುದ್ಧ ಗರಂ ಆದ ಘಟನೆ ನಡೆಯಿತು. ಆದರೂ ಅಧಿಕಾರಿಗಳು ಕಾರನ್ನು ದೇವಾಲಯದ ಬಳಿ ಕೊಂಡೊಯ್ಯಲು ಅವಕಾಶವಿಲ್ಲ ಎಂದು ತಿಳಿಸಿದರು. ಬಳಿಕ ಕಾರಿನಿಂದ ಇಳಿದು ರೇವಣ್ಣ ಅವರು ನಡೆದುಕೊಂಡೇ ದೇವಾಲಯಕ್ಕೆ ಹೋಗಿ ಹಾಸನಾಂಬೆ ದೇವಿಯ ದರ್ಶನ ಪಡೆದು ವಾಪಸ್‌ ತೆರಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago