ಹಾಸನ: ಶ್ರೇಯಸ್ ಪಟೇಲ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ ಎಂದು ಮಾಜಿ ಶಾಸಕ ಪ್ರೀತಂಗೌಡ ಹೇಳಿದ್ದಾರೆ.
ಈ ಬಗ್ಗೆ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ. ಅದರ ಶ್ರೇಯಸ್ಸು ಶ್ರೇಯಸ್ ಪಟೇಲ್ಗೂ ಸಲ್ಲುತ್ತದೆ. ಈ ಮೂಲಕ 2024ರ ವಾಸ್ತು, ದಿಕ್ಕು, ದಿಸೆ ಎಲ್ಲಾ ಬದಲಾಗಿದೆ ಎಂದರು.
ಇಲ್ಲಿಯವರೆಗೂ ಕಾರ್ಯಕ್ರಮ ನಡೆಯುವಾಗ ಒಂದು ತೋಟ ಅಥವಾ ಒಂದು ಮನೆಯಲ್ಲಿ ಲೈಟ್ ಇರುತ್ತಿತ್ತು.
ಆದರೆ ಈಗ ಇಡೀ ಹೊಳೆನರಸೀಪುರದಲ್ಲಿ ಲೈಟ್ ಇದೆ. ಇದನ್ನು ನೋಡಿ ನನಗೆ ತುಂಬಾ ಖುಷಿಯಾಯಿತು. ಈಗ ಹೊಳೆನರಸೀಪುರ ಶ್ರೇಯಸ್ ಪಟೇಲ್ ಅವರ ತಾತನ ಕಾಲಕ್ಕೆ ಕೊಂಡ್ಯೊಯ್ದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಒಂದು ಪಕ್ಷದ ಹುದ್ದೆಯಲ್ಲಿದ್ದೇನೆ. ಶ್ರೇಯಸ್ ಪಟೇಲ್ ಬೇರೆ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದಾರೆ. ಮಾನವೀಯತೆ ಎನ್ನುವುದು ಬಹಳ ಮುಖ್ಯ. ಎಲ್ಲರೂ ಸೇರಿ ಹೊಳೆನರಸೀಪುರವನ್ನು ಮಾದರಿಯನ್ನಾಗಿ ಮಾಡೋಣ ಎಂದು ಸಲಹೆ ನೀಡಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…