ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು ಮುಗಿಬೀಳುತ್ತಿದ್ದಾರೆ. ಅಲ್ಲದೇ ಫೋಟೋ ತೆಗೆಯಲು, ವೀಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಜನರ ನಡೆಯಿಂದ ಆನೆಗೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕ್ರಮಕ್ಕೆ ಮುಂದಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಎಫ್ಓ ಸೌರಬ್ ಕುಮಾರ್ ಅವರು ಕಾಡಾನೆ ಭೀಮ ಗ್ರಾಮ ಹಾಗೂ ತೋಟಗಳಿಗೆ ಬರುತ್ತಿದೆ. ಇಟಿಎಫ್ ತಂಡ 24 ಗಂಟೆಗಳ ಕಾಲ ಕಾಡಾನೆ ಭೀಮನನ್ನು ಗಮನಿಸುತ್ತಿದೆ. ಈಗಾಗಲೇ ಸಾರ್ವಜನಿಕರಿಗೆ ವಿನಂತಿ ಮಾಡಿ ಎಚ್ಚರಿಕೆ ಕೊಡಲಾಗಿದೆ. ಸೆಕ್ಷನ್ 216, ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ 19/70 ಪ್ರಕಾರ ಪ್ರಾಣಿಗಳಿಗೆ ತೊಂದರೆ ನೀಡುವುದು ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.
ದಯವಿಟ್ಟು ಕಾಡು ಪ್ರಾಣಿಗಳ ಹತ್ತಿರ ಯಾರೂ ಹೋಗಬಾರದು. ನಿಮ್ಮ ಪ್ರಾಣವನ್ನು ನೀವೇ ರಕ್ಷಣೆ ಮಾಡಿಕೊಳ್ಳಬೇಕಿದೆ. ಕಾಡು ಪ್ರಾಣಿ ಕಾಡು ಪ್ರಾಣಿನೇ. ಹೀಗಾಗಿ ಜನ ಅನಾವಶ್ಯಕವಾಗಿ ಆನೆಗೆ ತೊಂದರೆ ಕೊಡಬಾರದು. ಇನ್ನು ಮುಂದೆ ಭೀಮನ ಸಮೀಪ ಹೋಗಿ ವಿಡಿಯೋ ಚಿತ್ರೀಕರಣ ಮಾಡಿದರೆ ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…