ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು ಮುಗಿಬೀಳುತ್ತಿದ್ದಾರೆ. ಅಲ್ಲದೇ ಫೋಟೋ ತೆಗೆಯಲು, ವೀಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಜನರ ನಡೆಯಿಂದ ಆನೆಗೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕ್ರಮಕ್ಕೆ ಮುಂದಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಎಫ್ಓ ಸೌರಬ್ ಕುಮಾರ್ ಅವರು ಕಾಡಾನೆ ಭೀಮ ಗ್ರಾಮ ಹಾಗೂ ತೋಟಗಳಿಗೆ ಬರುತ್ತಿದೆ. ಇಟಿಎಫ್ ತಂಡ 24 ಗಂಟೆಗಳ ಕಾಲ ಕಾಡಾನೆ ಭೀಮನನ್ನು ಗಮನಿಸುತ್ತಿದೆ. ಈಗಾಗಲೇ ಸಾರ್ವಜನಿಕರಿಗೆ ವಿನಂತಿ ಮಾಡಿ ಎಚ್ಚರಿಕೆ ಕೊಡಲಾಗಿದೆ. ಸೆಕ್ಷನ್ 216, ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ 19/70 ಪ್ರಕಾರ ಪ್ರಾಣಿಗಳಿಗೆ ತೊಂದರೆ ನೀಡುವುದು ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.
ದಯವಿಟ್ಟು ಕಾಡು ಪ್ರಾಣಿಗಳ ಹತ್ತಿರ ಯಾರೂ ಹೋಗಬಾರದು. ನಿಮ್ಮ ಪ್ರಾಣವನ್ನು ನೀವೇ ರಕ್ಷಣೆ ಮಾಡಿಕೊಳ್ಳಬೇಕಿದೆ. ಕಾಡು ಪ್ರಾಣಿ ಕಾಡು ಪ್ರಾಣಿನೇ. ಹೀಗಾಗಿ ಜನ ಅನಾವಶ್ಯಕವಾಗಿ ಆನೆಗೆ ತೊಂದರೆ ಕೊಡಬಾರದು. ಇನ್ನು ಮುಂದೆ ಭೀಮನ ಸಮೀಪ ಹೋಗಿ ವಿಡಿಯೋ ಚಿತ್ರೀಕರಣ ಮಾಡಿದರೆ ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…
ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…
• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…
ಹೊಸದಿಲ್ಲಿ : ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…