Mysore
22
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಹಾಸನ| ರಸ್ತೆಯಲ್ಲಿ ಸಿಕ್ಕ ಚಿನ್ನದ ಸರ: ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಬಸ್‌ ಚಾಲಕ

big shocking for ksrtc transport unions

ಹಾಸನ: ಕೆಎಸ್‌ಆರ್‌ಟಿಸಿ ಬಸ್‌ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಧರ್ಮ ಎಂಬುವವರಿಗೆ ರಸ್ತೆಯಲ್ಲಿ 38 ಗ್ರಾಂ ಚಿನ್ನದ ಮಾಂಗಲ್ಯ ಸರ ಸಿಕ್ಕಿತು. ಧರ್ಮ ಅವರು ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುತ್ತಿದ್ದಾಗ ಹಾಸನದ ಚಿಟ್ಟನಹಳ್ಳಿ ಬಡಾವಣೆಯಲ್ಲಿರುವ ನರ್ಸಿಂಗ್‌ ಕಾಲೇಜು ರಸ್ತೆಯಲ್ಲಿ ಚಿನ್ನದ ಮಾಂಗಲ್ಯ ಸರ ಸಿಕ್ಕಿತ್ತು.

ಅದನ್ನು ತೆಗೆದುಕೊಂಡು ಬಂದಿದ್ದರು. ಕೆಲ ಸಮಯದ ಬಳಿಕ ಅದೇ ರಸ್ತೆಯಲ್ಲಿ ಸರ ಕಳೆದುಕೊಂಡಿದ್ದ ಮಹಿಳೆ ಹಾಗೂ ಕುಟುಂಬದವರು ಸರ ಹುಡುಕುತ್ತಿರುವುದನನು ಗಮನಿಸಿದ್ದರು.

ಈ ಬಗ್ಗೆ ಧರ್ಮ ಅವರು ಸ್ಥಳಕ್ಕಾಗಮಿಸಿ ಮಹಿಳೆ ಹಾಗೂ ಕುಟುಂಬದವರನ್ನು ವಿಚಾರಿಸಿದ್ದಾರೆ. ಕಳೆದುಕೊಂಡ ಸರ ಹಾಗೂ ಒಡವೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ತನಗೆ ಸಿಕ್ಕಿರುವ ಸರ ಅವರದ್ದು ಎಂಬ ಬಗ್ಗೆ ಸೂಕ್ತ ಮಾಹಿತಿ ಪಡೆದು ಕೆಎಂಎಫ್‌ ಘಟಕವೊಂದರ ವ್ಯವಸ್ಥಾಪಕ ದಿನೇಶ್‌ ಅವರ ಸಮ್ಮುಖದಲ್ಲಿ ಮಹಿಳೆಗೆ ಸರ ಹಸ್ತಾಂತರಿಸಿದ್ದಾರೆ.

ಬಸ್‌ ಚಾಲಕನ ಪ್ರಾಮಾಣಿಕತೆ ಮಹಿಳೆಯ ಕುಟುಂಬ ಹಾಗೂ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

Tags:
error: Content is protected !!