ಹಾಸನ: ವಾಹನಗಳಿಗೆ ನಿಷೇಧವಿದ್ದರೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ.
ಹೊಸಹಳ್ಳಿ ಬೆಟ್ಟದ ಕೆಳಗಿರುವ ಎಸಳೂರು ವಲಯ ಅರಣ್ಯ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಎರಡು ವಾಹನಗಳಲ್ಲಿ ಬಂದ ಪ್ರವಾಸಿಗರು ಹುಚ್ಚಾಟ ನಡೆಸಿದ್ದಾರೆ.
ಪ್ರವಾಸಿಗರು ತಮ್ಮ ವಾಹನವನ್ನು ಮನಸೋಇಚ್ಛೆ ಓಡಿಸಿ ಪ್ರಕೃತಿ ಸೌಂದರ್ಯವನ್ನು ಹಾಳು ಮಾಡಿದ್ದಾರೆ. ಈ ವಿಡಿಯೋವನ್ನು ತಮ್ಮ ಇನ್ಸ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಫಾಲೋವರ್ಸ್ಗಳನ್ನು ಹೆಚ್ಚಿಸಿಕೊಳ್ಳಲು ಹಾಗೂ ಲೈಕ್ ಗಿಟ್ಟಿಸಿಕೊಳ್ಳಲು ಪರಿಸರ ಹಾಳು ಮಾಡುತ್ತಿರುವ ಪ್ರವಾಸಿಗರ ಮೇಲೆ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.
ಈ ರೀತಿ ಪ್ರವಾಸಿ ತಾಣಗಳನ್ನು ಶೋಕಿಗಾಗಿ ಹಾಳು ಮಾಡುತ್ತಿರುವವವರ ವಿರುದ್ಧ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…