ಹಾಸನ

ಪೂಜಾ ಕೈಂಕರ್ಯಗಳೊಂದಿಗೆ ಹಾಸನಾಂಬೆ ಗರ್ಭಗುಡಿ ಓಪನ್

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲನ್ನು ಇಂದು ತೆರೆಯಲಾಗಿದೆ.

ಇಂದು ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಜೊತೆ ಪ್ರಧಾನ ಅರ್ಚಕ ನಾಗರಾಜ್‌ ನೇತೃತ್ವದಲ್ಲಿ ಬಾಗಿಲನ್ನು ತೆರೆಯಲಾಯಿತು. ಗರ್ಭಗುಡಿ ಬಾಗಿಲು ತೆರೆಯುವ ಮೊದಲು ಬಾಗಿಲಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಮಧ್ಯಾಹ್ನ 12.10ಕ್ಕೆ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್‌ ಅವರು ಗೊನೆ ಇರುವ ಬಾಳೆಗೊನೆ ಕಡಿದ ಬಳಿಕ ಗರ್ಭಗುಡಿಯ ಬಾಗಿಲನ್ನು ತೆರೆಯಲಾಯಿತು.

ಅಲ್ಲಿ ಕಳೆದ ವರ್ಷ ಗರ್ಭಗುಡಿ ಮುಚ್ಚುವ ವೇಳೆ ಹಚ್ಚಿದ್ದ ದೀಪ ಉರಿಯುತ್ತಿತ್ತು. ಇನ್ನು ದೇವರಿಗೆ ಇಟ್ಟಿದ್ದ ಹೂವು ಕೂಡ ಬಾಡಿರಲಿಲ್ಲ. ಹಾಗೆಯೇ ದೇವರಿಗೆ ಇಟ್ಟಿದ್ದ ನೈವೇದ್ಯ ಕೂಡ ಹಳಸಿರಲಿಲ್ಲ.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಸಂಸದ ಶ್ರೇಯಸ್‌ ಪಟೇಲ್‌, ಶಾಸಕರಾದ ಸ್ವರೂಪ್‌ ಪಟೇಲ್‌, ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸತ್ಯಭಾಮಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಬಾರಿ ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.

ನವೆಂಬರ್.3ರವರೆಗೂ ಹಾಸನಾಂಬ ಜಾತ್ರಾ ಮಹೋತ್ಸವ ಜರುಗಲಿದ್ದು, ಇಂದು ಹಾಗೂ ಕೊನೆಯ ದಿನ ದೇವಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಉಳಿದ 9 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

14 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

28 mins ago

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

60 mins ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

1 hour ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

5 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

5 hours ago