ಹಾಸನ

ಅಕ್ಟೋಬರ್ ೨೪ ರಂದು ಹಾಸನಾಂಬ ದೇವಾಲಯ ಓಪನ್

ಹಾಸನ : ಪ್ರಸಿದ್ಧ ಶ್ರೀ ಹಾಸನಾಂಬ ದೇವಾಲಯದ ಬಾಗಿಲು ಈ ಬಾರಿ ಅಕ್ಟೋಬರ್‌ ೨೪ ರಂದು ತೆರೆಯಲಾಗುತ್ತಿದ್ದು, ನವೆಂಬರ್‌ ೩ ರಂದು ೯ ದಿನಗಳ ದರ್ಶನ ಅಂತ್ಯಗೊಳ್ಳಲಿದೆ. ಇನ್ನು ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಬೇಕಾದ ಸಿದ್ಧತೆಗಳನ್ನ ಜಿಲ್ಲಾಡಳಿತ ಕೂಡ ಮಾಡಿಕೊಳ್ಳುತ್ತಿದೆ.

ಈ ಸಂಬಂಧವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಾಸನಾಂಬ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದ್ದು, ಕಳೆದ ಬಾರಿ ಕಂಡು ಬಂದ ಲೋಪದೋಷಗಳನ್ನ ಸರಿಪಡಿಸಿಕೊಂಡು ಜಾತ್ರೆಗೆ ಬೇಕಾದ ಅಗತ್ಯ ಸಿದ್ದತೆಗೆ ಕ್ರಮಕೈಗೊಳ್ಳುವಂತೆ ಡಿಸಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ೯ ದಿನಗಳು ಮಾತ್ರ ಅವಕಾಶವಿರುತ್ತದೆ. ಭಕ್ತಾಧಿಗಳಿಗೆ ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಕುಡಿಯುವ ನೀರು, ವಿದ್ಯುತ್‌ ದೀಪಾಲಂಕಾರ ಹೂವಿನ ಅಲಂಕಾರ, ಲಡ್ಡು ಪ್ರಸಾದ, ದೊನ್ನೆ ಪ್ರಸಾದ ಮತ್ತೀತರ ಅಗತ್ಯ ಸಿದ್ಧತೆಗಾಗಿ ಒಂದು ವಾರದೊಳಗೆ ಟೆಂಡರ್‌ ಕರೆಯುವಂತೆ

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ಹೊಣೆ: ಉದ್ಯಮಿ ಕೆಜಿಎಫ್‌ ಬಾಬು

ಬೆಂಗಳೂರು: ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಉದ್ಯಮಿ ಕೆಜಿಎಫ್‌ ಬಾಬು ಅಳಲು ತೋಡಿಕೊಂಡಿದ್ದಾರೆ. ಈ…

4 mins ago

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್‌ ಕಾಗೋಡು…

9 mins ago

ಮೈಸೂರಿನಲ್ಲೇ ಗಾಂಜಾ ಕೇಸು ಜಾಸ್ತಿ ಯಾಕೆ.? ಹೈಕೋರ್ಟ್‌ ಕಳವಳ

ಬೆಂಗಳೂರು: ಲೋಕ್‌ ಅದಾಲತ್‌ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್‌ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್‌ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ…

42 mins ago

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…

2 hours ago

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…

3 hours ago

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…

3 hours ago