ಹಾಸನ : ಇತಿಹಾಸ ಹೊಂದಿರುವ ಹಾಸನಾಂಬ ದೇಗುಲಕ್ಕೆ ಸಮಸ್ಯೆಗೆ ಪರಿಹಾರ ಬೇಡಿಕೊಳ್ಳಲು ಜನ ಬರುತ್ತಾರೆ. ನಾವೂ ಚಿಕ್ಕ ವಯಸ್ಸಿನ ಮಕ್ಕಳಿದ್ದಾಗಿನಿಂದ ದೇವಿ ಆಶೀರ್ವಾದ ಪಡೆಯಲು ಬರುತ್ತಿದ್ದೆವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೆನೆದಿದ್ದಾರೆ.
ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನ ನಂತರ ಮಾತನಾಡಿದ ಅವರು, ಅಂದಿನ ದಿನಗಳು ಇಂದಿಗೂ ನೆನಪಿನಲ್ಲಿವೆ. ನಮಗೆ ಜಾತ್ರೆಗಳಿಗೆ ಹೋಗುವಾಗ ಬಹಳ ಖುಷಿ ಇತ್ತು. ಈಗ ರಾಜ್ಯದಲ್ಲಿ ಗ್ರಾಮೀಣ ಭಾಗದ ರೈತರು ಸಂಕಷ್ಟದಲ್ಲಿದ್ದಾರೆ. ಮಳೆ ಅವಾಂತರದಿಂದ ಬೆಳೆ ನಾಶವಾಗಿದೆ. ರಾಜ್ಯದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸಂಕಷ್ಟ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇಂದು ಹಾಸನಾಂಬೆ ದೇವಿಯ ದರ್ಶನ ಮಾಡಿ ತಾಯಿಯ ಅನುಗ್ರಹ ಕೋರಿದ್ದೇನೆ. ನಾಡಿನಲ್ಲಿ ಸಂಪತ್ತಿನ ಕೊರತೆಯಿಲ್ಲ. ಆದರೆ ಅದು ಸಮಾನವಾಗಿ ಹಂಚಿಕೆಯಾಗಬೇಕು. ನಾಡಿನ ಸಂಪತ್ತು ಸರಿಯಾಗಿ ಸದ್ಬಳಕೆ ಆಗಬೇಕು. ಆಡಳಿತ ಮಾಡುವವರಿಗೆ ಒಳ್ಳೆಯ ಸದ್ಭುದ್ಧಿ ಕೊಟ್ಟು ಆ ತಾಯಿ ಕಾಪಾಡಲಿ ಎಂದು ಆಶಿಸಿದ್ದಾರೆ.
ಮನುಷ್ಯರು ನಾವು ಮಾನವೀಯತೆಯನ್ನು ಕಳೆದುಕೊಳ್ಳುತ್ತಿದ್ದೇವೆ. ಸತ್ಯ ಧರ್ಮ ಹಿಂದಿನ ಕಾಲದಲ್ಲಿ ಇತ್ತು ಈಗ ಕಳೆದುಹೋಗುತ್ತಿದೆ. ಮತ್ತೆ ಅಂತಹ ದಿನಗಳು ಬರಲಿ ಎಂದು ವಿಶೇಷವಾಗಿ ಬೇಡಿದ್ದೇನೆ. ನಮ್ಮ ಜೆಡಿಸ್ ಪಕ್ಷಕ್ಕೂ ಹೆಚ್ಚಿನ ಶಕ್ತಿ ಸಿಕ್ಕಿ ಜನತೆಗೆ ನಮ್ಮ ಪಕ್ಷದಿಂದ ಒಳ್ಳೆಯ ಕೆಲಸ ಮಾಡಲು ದೇವಿ ಶಕ್ತಿ ನೀಡಲಿ ಎಂದು ಬೇಡಿದ್ದೇನೆ ಎಂದಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…