ಹಾಸನ

ಆಡಳಿತದಲ್ಲಿರುವವರಿಗೆ ಹಾಸನಾಂಬೆ ಸದ್ಭುದ್ಧಿ ಕೊಟ್ಟು ಕಾಪಾಡಲಿ : ಎಚ್‌ಡಿಕೆ

ಹಾಸನ : ಇತಿಹಾಸ ಹೊಂದಿರುವ ಹಾಸನಾಂಬ ದೇಗುಲಕ್ಕೆ ಸಮಸ್ಯೆಗೆ ಪರಿಹಾರ ಬೇಡಿಕೊಳ್ಳಲು ಜನ ಬರುತ್ತಾರೆ. ನಾವೂ ಚಿಕ್ಕ ವಯಸ್ಸಿನ ಮಕ್ಕಳಿದ್ದಾಗಿನಿಂದ ದೇವಿ ಆಶೀರ್ವಾದ ಪಡೆಯಲು ಬರುತ್ತಿದ್ದೆವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೆನೆದಿದ್ದಾರೆ.

ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನ ನಂತರ ಮಾತನಾಡಿದ ಅವರು, ಅಂದಿನ ದಿನಗಳು‌ ಇಂದಿಗೂ ನೆನಪಿನಲ್ಲಿವೆ. ನಮಗೆ ಜಾತ್ರೆಗಳಿಗೆ ಹೋಗುವಾಗ ಬಹಳ ಖುಷಿ ಇತ್ತು. ಈಗ ರಾಜ್ಯದಲ್ಲಿ ಗ್ರಾಮೀಣ ಭಾಗದ ರೈತರು ಸಂಕಷ್ಟದಲ್ಲಿದ್ದಾರೆ. ಮಳೆ ಅವಾಂತರದಿಂದ ಬೆಳೆ ನಾಶವಾಗಿದೆ. ರಾಜ್ಯದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸಂಕಷ್ಟ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂದು ಹಾಸನಾಂಬೆ ದೇವಿಯ ದರ್ಶನ ಮಾಡಿ ತಾಯಿಯ ಅನುಗ್ರಹ ಕೋರಿದ್ದೇನೆ. ನಾಡಿನಲ್ಲಿ ಸಂಪತ್ತಿನ ಕೊರತೆಯಿಲ್ಲ. ಆದರೆ‌ ಅದು ಸಮಾನವಾಗಿ ಹಂಚಿಕೆಯಾಗಬೇಕು. ನಾಡಿನ ಸಂಪತ್ತು ಸರಿಯಾಗಿ ಸದ್ಬಳಕೆ ಆಗಬೇಕು. ಆಡಳಿತ ಮಾಡುವವರಿಗೆ ಒಳ್ಳೆಯ ಸದ್ಭುದ್ಧಿ ಕೊಟ್ಟು ಆ ತಾಯಿ ಕಾಪಾಡಲಿ ಎಂದು‌ ಆಶಿಸಿದ್ದಾರೆ.

ಮನುಷ್ಯರು ನಾವು ಮಾನವೀಯತೆಯನ್ನು ಕಳೆದುಕೊಳ್ಳುತ್ತಿದ್ದೇವೆ. ಸತ್ಯ ಧರ್ಮ ಹಿಂದಿನ ಕಾಲದಲ್ಲಿ ಇತ್ತು ಈಗ ಕಳೆದುಹೋಗುತ್ತಿದೆ. ಮತ್ತೆ ಅಂತಹ ದಿನಗಳು ಬರಲಿ‌ ಎಂದು ವಿಶೇಷವಾಗಿ ಬೇಡಿದ್ದೇನೆ. ನಮ್ಮ ಜೆಡಿಸ್ ಪಕ್ಷಕ್ಕೂ ಹೆಚ್ಚಿನ ಶಕ್ತಿ ಸಿಕ್ಕಿ ಜನತೆಗೆ ನಮ್ಮ ಪಕ್ಷದಿಂದ ಒಳ್ಳೆಯ ಕೆಲಸ ಮಾಡಲು ದೇವಿ ಶಕ್ತಿ‌ ನೀಡಲಿ ಎಂದು ಬೇಡಿದ್ದೇನೆ ಎಂದಿದ್ದಾರೆ.

lokesh

Recent Posts

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

2 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

2 hours ago

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

16 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

16 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

17 hours ago