ಹಾಸನ

ಆಡಳಿತದಲ್ಲಿರುವವರಿಗೆ ಹಾಸನಾಂಬೆ ಸದ್ಭುದ್ಧಿ ಕೊಟ್ಟು ಕಾಪಾಡಲಿ : ಎಚ್‌ಡಿಕೆ

ಹಾಸನ : ಇತಿಹಾಸ ಹೊಂದಿರುವ ಹಾಸನಾಂಬ ದೇಗುಲಕ್ಕೆ ಸಮಸ್ಯೆಗೆ ಪರಿಹಾರ ಬೇಡಿಕೊಳ್ಳಲು ಜನ ಬರುತ್ತಾರೆ. ನಾವೂ ಚಿಕ್ಕ ವಯಸ್ಸಿನ ಮಕ್ಕಳಿದ್ದಾಗಿನಿಂದ ದೇವಿ ಆಶೀರ್ವಾದ ಪಡೆಯಲು ಬರುತ್ತಿದ್ದೆವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೆನೆದಿದ್ದಾರೆ.

ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನ ನಂತರ ಮಾತನಾಡಿದ ಅವರು, ಅಂದಿನ ದಿನಗಳು‌ ಇಂದಿಗೂ ನೆನಪಿನಲ್ಲಿವೆ. ನಮಗೆ ಜಾತ್ರೆಗಳಿಗೆ ಹೋಗುವಾಗ ಬಹಳ ಖುಷಿ ಇತ್ತು. ಈಗ ರಾಜ್ಯದಲ್ಲಿ ಗ್ರಾಮೀಣ ಭಾಗದ ರೈತರು ಸಂಕಷ್ಟದಲ್ಲಿದ್ದಾರೆ. ಮಳೆ ಅವಾಂತರದಿಂದ ಬೆಳೆ ನಾಶವಾಗಿದೆ. ರಾಜ್ಯದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸಂಕಷ್ಟ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂದು ಹಾಸನಾಂಬೆ ದೇವಿಯ ದರ್ಶನ ಮಾಡಿ ತಾಯಿಯ ಅನುಗ್ರಹ ಕೋರಿದ್ದೇನೆ. ನಾಡಿನಲ್ಲಿ ಸಂಪತ್ತಿನ ಕೊರತೆಯಿಲ್ಲ. ಆದರೆ‌ ಅದು ಸಮಾನವಾಗಿ ಹಂಚಿಕೆಯಾಗಬೇಕು. ನಾಡಿನ ಸಂಪತ್ತು ಸರಿಯಾಗಿ ಸದ್ಬಳಕೆ ಆಗಬೇಕು. ಆಡಳಿತ ಮಾಡುವವರಿಗೆ ಒಳ್ಳೆಯ ಸದ್ಭುದ್ಧಿ ಕೊಟ್ಟು ಆ ತಾಯಿ ಕಾಪಾಡಲಿ ಎಂದು‌ ಆಶಿಸಿದ್ದಾರೆ.

ಮನುಷ್ಯರು ನಾವು ಮಾನವೀಯತೆಯನ್ನು ಕಳೆದುಕೊಳ್ಳುತ್ತಿದ್ದೇವೆ. ಸತ್ಯ ಧರ್ಮ ಹಿಂದಿನ ಕಾಲದಲ್ಲಿ ಇತ್ತು ಈಗ ಕಳೆದುಹೋಗುತ್ತಿದೆ. ಮತ್ತೆ ಅಂತಹ ದಿನಗಳು ಬರಲಿ‌ ಎಂದು ವಿಶೇಷವಾಗಿ ಬೇಡಿದ್ದೇನೆ. ನಮ್ಮ ಜೆಡಿಸ್ ಪಕ್ಷಕ್ಕೂ ಹೆಚ್ಚಿನ ಶಕ್ತಿ ಸಿಕ್ಕಿ ಜನತೆಗೆ ನಮ್ಮ ಪಕ್ಷದಿಂದ ಒಳ್ಳೆಯ ಕೆಲಸ ಮಾಡಲು ದೇವಿ ಶಕ್ತಿ‌ ನೀಡಲಿ ಎಂದು ಬೇಡಿದ್ದೇನೆ ಎಂದಿದ್ದಾರೆ.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

8 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

8 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

9 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

10 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

10 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

11 hours ago