ಹಾಸನ : ಇತಿಹಾಸ ಹೊಂದಿರುವ ಹಾಸನಾಂಬ ದೇಗುಲಕ್ಕೆ ಸಮಸ್ಯೆಗೆ ಪರಿಹಾರ ಬೇಡಿಕೊಳ್ಳಲು ಜನ ಬರುತ್ತಾರೆ. ನಾವೂ ಚಿಕ್ಕ ವಯಸ್ಸಿನ ಮಕ್ಕಳಿದ್ದಾಗಿನಿಂದ ದೇವಿ ಆಶೀರ್ವಾದ ಪಡೆಯಲು ಬರುತ್ತಿದ್ದೆವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೆನೆದಿದ್ದಾರೆ.
ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನ ನಂತರ ಮಾತನಾಡಿದ ಅವರು, ಅಂದಿನ ದಿನಗಳು ಇಂದಿಗೂ ನೆನಪಿನಲ್ಲಿವೆ. ನಮಗೆ ಜಾತ್ರೆಗಳಿಗೆ ಹೋಗುವಾಗ ಬಹಳ ಖುಷಿ ಇತ್ತು. ಈಗ ರಾಜ್ಯದಲ್ಲಿ ಗ್ರಾಮೀಣ ಭಾಗದ ರೈತರು ಸಂಕಷ್ಟದಲ್ಲಿದ್ದಾರೆ. ಮಳೆ ಅವಾಂತರದಿಂದ ಬೆಳೆ ನಾಶವಾಗಿದೆ. ರಾಜ್ಯದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸಂಕಷ್ಟ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇಂದು ಹಾಸನಾಂಬೆ ದೇವಿಯ ದರ್ಶನ ಮಾಡಿ ತಾಯಿಯ ಅನುಗ್ರಹ ಕೋರಿದ್ದೇನೆ. ನಾಡಿನಲ್ಲಿ ಸಂಪತ್ತಿನ ಕೊರತೆಯಿಲ್ಲ. ಆದರೆ ಅದು ಸಮಾನವಾಗಿ ಹಂಚಿಕೆಯಾಗಬೇಕು. ನಾಡಿನ ಸಂಪತ್ತು ಸರಿಯಾಗಿ ಸದ್ಬಳಕೆ ಆಗಬೇಕು. ಆಡಳಿತ ಮಾಡುವವರಿಗೆ ಒಳ್ಳೆಯ ಸದ್ಭುದ್ಧಿ ಕೊಟ್ಟು ಆ ತಾಯಿ ಕಾಪಾಡಲಿ ಎಂದು ಆಶಿಸಿದ್ದಾರೆ.
ಮನುಷ್ಯರು ನಾವು ಮಾನವೀಯತೆಯನ್ನು ಕಳೆದುಕೊಳ್ಳುತ್ತಿದ್ದೇವೆ. ಸತ್ಯ ಧರ್ಮ ಹಿಂದಿನ ಕಾಲದಲ್ಲಿ ಇತ್ತು ಈಗ ಕಳೆದುಹೋಗುತ್ತಿದೆ. ಮತ್ತೆ ಅಂತಹ ದಿನಗಳು ಬರಲಿ ಎಂದು ವಿಶೇಷವಾಗಿ ಬೇಡಿದ್ದೇನೆ. ನಮ್ಮ ಜೆಡಿಸ್ ಪಕ್ಷಕ್ಕೂ ಹೆಚ್ಚಿನ ಶಕ್ತಿ ಸಿಕ್ಕಿ ಜನತೆಗೆ ನಮ್ಮ ಪಕ್ಷದಿಂದ ಒಳ್ಳೆಯ ಕೆಲಸ ಮಾಡಲು ದೇವಿ ಶಕ್ತಿ ನೀಡಲಿ ಎಂದು ಬೇಡಿದ್ದೇನೆ ಎಂದಿದ್ದಾರೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…