ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ.
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್.24ರ ಮಧ್ಯಾಹ್ನ ತೆರೆಯಲಿದೆ.
ನವೆಂಬರ್.3ರಂದು ದರ್ಶನಕ್ಕೆ ತೆರೆ ಬೀಳಲಿದ್ದು, ಹಾಸನಾಂಬೆ ದರ್ಶನಕ್ಕೆ ಈ ಬಾರಿ ಕೇವಲ 9 ದಿನಗಳು ಮಾತ್ರ ಇರಲಿದೆ.
ಪ್ರಥಮ ಹಾಗೂ ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ಏಳು ದಿನದಲ್ಲಿ ಈ ಬಾರಿ ಕನಿಷ್ಠ 20 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದೆ.
ಈ ಹಿನ್ನೆಲೆಯಲ್ಲಿ ದೇವಾಲಯದ ಆವರಣವನ್ನು ಈಗಾಗಲೇ ಸಿಂಗರಿಸಲಾಗುತ್ತಿದ್ದು, ರಾಜಗೋಪುರ ಮತ್ತು ದೇವಾಲಯದ ಬಾಗಿಲಿಗೆ ಬಣ್ಣ ಬಳಿಯಲಾಗುತ್ತಿದೆ.
ವಿದ್ಯುತ್ ದೀಪಾಲಂಕಾರ ಕೆಲಸ ಕೂಡ ಶರವೇಗದಲ್ಲಿ ಸಾಗಿದ್ದು, ಈಗಾಗಲೇ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಲಾಗಿದೆ.
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…
ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು…
ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…