ಹಾಸನ: ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಟ್ಟು, ಮಾಹಿತಿ ಪಡೆದುಕೊಳ್ಳಲು ಅರಣ್ಯ ಇಲಾಖೆ ಬಿಗ್ ಪ್ಲಾನ್ ರೂಪಿಸಿದೆ.
ಹಾಸನ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಗಳ ಮೇಲೆ ನಿಗಾ ವಹಿಸಲು ʼಆನೆ ಎಲ್ಲಿ ಡಾಟ್ ಕಾಂ ವೆಬ್ಸೈಟ್ʼ ರೂಪಿಸಿದ್ದು, ವೆಬ್ಸೈಟ್ಗೆ ಚಾಲನೆ ದೊರೆತಿದೆ.
ಹಾಸನ ಅರಣ್ಯ ಭವನದಲ್ಲಿ ಫಾರೆಸ್ಟ್ ಕಂಟ್ರೋಲ್ ರೂಂ ತೆರೆದು ಪೊಲೀಸ್ ಇಲಾಖೆಯ ಮಾದರಿಯಲ್ಲಿ ದಿನದ 24 ಗಂಟೆಯೂ ಮೂರು ಪಾಳಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಕಾಡಂಚಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಾಡಾನೆಗಳು ದಾಳಿ ನಡೆಸುತ್ತಿದ್ದು, ರೈತರು ಬೆಳೆದ ಫಸಲನ್ನು ತುಳಿದು ನಾಶ ಪಡಿಸುತ್ತಿವೆ. ಈ ಹಿನ್ನೆಲೆಯಲ್ಲಿ ಈ ವೆಬ್ಸೈಟ್ಗೆ ಚಾಲನೆ ನೀಡಲಾಗಿದ್ದು, ಇದರಲ್ಲಿ ಕಾಡಾನೆಗಳ ವಿವರ ಲಭ್ಯವಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಫ್ ಸೌರಭ್ ಕುಮಾರ್ ಅವರು, ಜಿಲ್ಲೆಯಾದ್ಯಂತ ಕಂಟ್ರೋಲ್ ರೂಂ ವಿಸ್ತರಿಸಲಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನಲ್ಲಿ ಸಂಚರಿಸುವ ಕಾಡಾನೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಗೂಗಲ್ ಮ್ಯಾಪ್ ಹಾಗೂ ಸ್ಯಾಟಲೈಟ್ ಮ್ಯಾಪ್ಗಳ ಸಹಾಯದಿಂದ ಆನೆಗಳು ಎಲ್ಲಿವೆ.?, ಗುಂಪಿನಲ್ಲಿವೆಯಾ ಅಥವಾ ಒಂಟಿಯಾಗಿವೆಯಾ.?, ಗ್ರಾಮಗಳ ಹತ್ತಿರವಿದೆಯಾ ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…
ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…
ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ಜಾಯ್ ರೈಡ್ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…