ಹಾಸನ: ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಟ್ಟು, ಮಾಹಿತಿ ಪಡೆದುಕೊಳ್ಳಲು ಅರಣ್ಯ ಇಲಾಖೆ ಬಿಗ್ ಪ್ಲಾನ್ ರೂಪಿಸಿದೆ.
ಹಾಸನ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಗಳ ಮೇಲೆ ನಿಗಾ ವಹಿಸಲು ʼಆನೆ ಎಲ್ಲಿ ಡಾಟ್ ಕಾಂ ವೆಬ್ಸೈಟ್ʼ ರೂಪಿಸಿದ್ದು, ವೆಬ್ಸೈಟ್ಗೆ ಚಾಲನೆ ದೊರೆತಿದೆ.
ಹಾಸನ ಅರಣ್ಯ ಭವನದಲ್ಲಿ ಫಾರೆಸ್ಟ್ ಕಂಟ್ರೋಲ್ ರೂಂ ತೆರೆದು ಪೊಲೀಸ್ ಇಲಾಖೆಯ ಮಾದರಿಯಲ್ಲಿ ದಿನದ 24 ಗಂಟೆಯೂ ಮೂರು ಪಾಳಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಕಾಡಂಚಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಾಡಾನೆಗಳು ದಾಳಿ ನಡೆಸುತ್ತಿದ್ದು, ರೈತರು ಬೆಳೆದ ಫಸಲನ್ನು ತುಳಿದು ನಾಶ ಪಡಿಸುತ್ತಿವೆ. ಈ ಹಿನ್ನೆಲೆಯಲ್ಲಿ ಈ ವೆಬ್ಸೈಟ್ಗೆ ಚಾಲನೆ ನೀಡಲಾಗಿದ್ದು, ಇದರಲ್ಲಿ ಕಾಡಾನೆಗಳ ವಿವರ ಲಭ್ಯವಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಫ್ ಸೌರಭ್ ಕುಮಾರ್ ಅವರು, ಜಿಲ್ಲೆಯಾದ್ಯಂತ ಕಂಟ್ರೋಲ್ ರೂಂ ವಿಸ್ತರಿಸಲಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನಲ್ಲಿ ಸಂಚರಿಸುವ ಕಾಡಾನೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಗೂಗಲ್ ಮ್ಯಾಪ್ ಹಾಗೂ ಸ್ಯಾಟಲೈಟ್ ಮ್ಯಾಪ್ಗಳ ಸಹಾಯದಿಂದ ಆನೆಗಳು ಎಲ್ಲಿವೆ.?, ಗುಂಪಿನಲ್ಲಿವೆಯಾ ಅಥವಾ ಒಂಟಿಯಾಗಿವೆಯಾ.?, ಗ್ರಾಮಗಳ ಹತ್ತಿರವಿದೆಯಾ ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…