ಹಾಸನ: ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಟ್ಟು, ಮಾಹಿತಿ ಪಡೆದುಕೊಳ್ಳಲು ಅರಣ್ಯ ಇಲಾಖೆ ಬಿಗ್ ಪ್ಲಾನ್ ರೂಪಿಸಿದೆ.
ಹಾಸನ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಗಳ ಮೇಲೆ ನಿಗಾ ವಹಿಸಲು ʼಆನೆ ಎಲ್ಲಿ ಡಾಟ್ ಕಾಂ ವೆಬ್ಸೈಟ್ʼ ರೂಪಿಸಿದ್ದು, ವೆಬ್ಸೈಟ್ಗೆ ಚಾಲನೆ ದೊರೆತಿದೆ.
ಹಾಸನ ಅರಣ್ಯ ಭವನದಲ್ಲಿ ಫಾರೆಸ್ಟ್ ಕಂಟ್ರೋಲ್ ರೂಂ ತೆರೆದು ಪೊಲೀಸ್ ಇಲಾಖೆಯ ಮಾದರಿಯಲ್ಲಿ ದಿನದ 24 ಗಂಟೆಯೂ ಮೂರು ಪಾಳಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಕಾಡಂಚಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಾಡಾನೆಗಳು ದಾಳಿ ನಡೆಸುತ್ತಿದ್ದು, ರೈತರು ಬೆಳೆದ ಫಸಲನ್ನು ತುಳಿದು ನಾಶ ಪಡಿಸುತ್ತಿವೆ. ಈ ಹಿನ್ನೆಲೆಯಲ್ಲಿ ಈ ವೆಬ್ಸೈಟ್ಗೆ ಚಾಲನೆ ನೀಡಲಾಗಿದ್ದು, ಇದರಲ್ಲಿ ಕಾಡಾನೆಗಳ ವಿವರ ಲಭ್ಯವಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಫ್ ಸೌರಭ್ ಕುಮಾರ್ ಅವರು, ಜಿಲ್ಲೆಯಾದ್ಯಂತ ಕಂಟ್ರೋಲ್ ರೂಂ ವಿಸ್ತರಿಸಲಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನಲ್ಲಿ ಸಂಚರಿಸುವ ಕಾಡಾನೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಗೂಗಲ್ ಮ್ಯಾಪ್ ಹಾಗೂ ಸ್ಯಾಟಲೈಟ್ ಮ್ಯಾಪ್ಗಳ ಸಹಾಯದಿಂದ ಆನೆಗಳು ಎಲ್ಲಿವೆ.?, ಗುಂಪಿನಲ್ಲಿವೆಯಾ ಅಥವಾ ಒಂಟಿಯಾಗಿವೆಯಾ.?, ಗ್ರಾಮಗಳ ಹತ್ತಿರವಿದೆಯಾ ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…