ಹಾಸನ

ಕಾಡಾನೆಗಳ ಮೇಲೆ ನಿಗಾ ವಹಿಸಲು ಹಾಸನದಲ್ಲಿ ವಿಶೇಷ ವೆಬ್‌ಸೈಟ್‌ ಲಾಂಚ್‌

ಹಾಸನ: ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಟ್ಟು, ಮಾಹಿತಿ ಪಡೆದುಕೊಳ್ಳಲು ಅರಣ್ಯ ಇಲಾಖೆ ಬಿಗ್‌ ಪ್ಲಾನ್‌ ರೂಪಿಸಿದೆ.

ಹಾಸನ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಗಳ ಮೇಲೆ ನಿಗಾ ವಹಿಸಲು ʼಆನೆ ಎಲ್ಲಿ ಡಾಟ್‌ ಕಾಂ ವೆಬ್‌ಸೈಟ್‌ʼ ರೂಪಿಸಿದ್ದು, ವೆಬ್‌ಸೈಟ್‌ಗೆ ಚಾಲನೆ ದೊರೆತಿದೆ.

ಹಾಸನ ಅರಣ್ಯ ಭವನದಲ್ಲಿ ಫಾರೆಸ್ಟ್‌ ಕಂಟ್ರೋಲ್‌ ರೂಂ ತೆರೆದು ಪೊಲೀಸ್‌ ಇಲಾಖೆಯ ಮಾದರಿಯಲ್ಲಿ ದಿನದ 24 ಗಂಟೆಯೂ ಮೂರು ಪಾಳಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಕಾಡಂಚಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಾಡಾನೆಗಳು ದಾಳಿ ನಡೆಸುತ್ತಿದ್ದು, ರೈತರು ಬೆಳೆದ ಫಸಲನ್ನು ತುಳಿದು ನಾಶ ಪಡಿಸುತ್ತಿವೆ. ಈ ಹಿನ್ನೆಲೆಯಲ್ಲಿ ಈ ವೆಬ್‌ಸೈಟ್‌ಗೆ ಚಾಲನೆ ನೀಡಲಾಗಿದ್ದು, ಇದರಲ್ಲಿ ಕಾಡಾನೆಗಳ ವಿವರ ಲಭ್ಯವಾಗುತ್ತದೆ.

ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಫ್‌ ಸೌರಭ್‌ ಕುಮಾರ್‌ ಅವರು, ಜಿಲ್ಲೆಯಾದ್ಯಂತ ಕಂಟ್ರೋಲ್ ರೂಂ ವಿಸ್ತರಿಸಲಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನಲ್ಲಿ ಸಂಚರಿಸುವ ಕಾಡಾನೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಗೂಗಲ್‌ ಮ್ಯಾಪ್‌ ಹಾಗೂ ಸ್ಯಾಟಲೈಟ್‌ ಮ್ಯಾಪ್‌ಗಳ ಸಹಾಯದಿಂದ ಆನೆಗಳು ಎಲ್ಲಿವೆ.?, ಗುಂಪಿನಲ್ಲಿವೆಯಾ ಅಥವಾ ಒಂಟಿಯಾಗಿವೆಯಾ.?, ಗ್ರಾಮಗಳ ಹತ್ತಿರವಿದೆಯಾ ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

29 seconds ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

6 mins ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

11 mins ago

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

8 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

11 hours ago