ಹಾಸನ: ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಟ್ಟು, ಮಾಹಿತಿ ಪಡೆದುಕೊಳ್ಳಲು ಅರಣ್ಯ ಇಲಾಖೆ ಬಿಗ್ ಪ್ಲಾನ್ ರೂಪಿಸಿದೆ.
ಹಾಸನ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಗಳ ಮೇಲೆ ನಿಗಾ ವಹಿಸಲು ʼಆನೆ ಎಲ್ಲಿ ಡಾಟ್ ಕಾಂ ವೆಬ್ಸೈಟ್ʼ ರೂಪಿಸಿದ್ದು, ವೆಬ್ಸೈಟ್ಗೆ ಚಾಲನೆ ದೊರೆತಿದೆ.
ಹಾಸನ ಅರಣ್ಯ ಭವನದಲ್ಲಿ ಫಾರೆಸ್ಟ್ ಕಂಟ್ರೋಲ್ ರೂಂ ತೆರೆದು ಪೊಲೀಸ್ ಇಲಾಖೆಯ ಮಾದರಿಯಲ್ಲಿ ದಿನದ 24 ಗಂಟೆಯೂ ಮೂರು ಪಾಳಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಕಾಡಂಚಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಾಡಾನೆಗಳು ದಾಳಿ ನಡೆಸುತ್ತಿದ್ದು, ರೈತರು ಬೆಳೆದ ಫಸಲನ್ನು ತುಳಿದು ನಾಶ ಪಡಿಸುತ್ತಿವೆ. ಈ ಹಿನ್ನೆಲೆಯಲ್ಲಿ ಈ ವೆಬ್ಸೈಟ್ಗೆ ಚಾಲನೆ ನೀಡಲಾಗಿದ್ದು, ಇದರಲ್ಲಿ ಕಾಡಾನೆಗಳ ವಿವರ ಲಭ್ಯವಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಫ್ ಸೌರಭ್ ಕುಮಾರ್ ಅವರು, ಜಿಲ್ಲೆಯಾದ್ಯಂತ ಕಂಟ್ರೋಲ್ ರೂಂ ವಿಸ್ತರಿಸಲಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನಲ್ಲಿ ಸಂಚರಿಸುವ ಕಾಡಾನೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಗೂಗಲ್ ಮ್ಯಾಪ್ ಹಾಗೂ ಸ್ಯಾಟಲೈಟ್ ಮ್ಯಾಪ್ಗಳ ಸಹಾಯದಿಂದ ಆನೆಗಳು ಎಲ್ಲಿವೆ.?, ಗುಂಪಿನಲ್ಲಿವೆಯಾ ಅಥವಾ ಒಂಟಿಯಾಗಿವೆಯಾ.?, ಗ್ರಾಮಗಳ ಹತ್ತಿರವಿದೆಯಾ ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…