ಹಾಸನ: ಹಾಸನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್ ಪಾಲಾಗಿದ್ದು, ಶಾಸಕ ಎಚ್.ಪಿ.ಸ್ವರೂಪ್ ತಮ್ಮ ಆಪ್ತರಿಗೆ ಗಾದಿ ಕೊಡಿಸುವ ಮೂಲಕ ತಮ್ಮ ನಾಯಕತ್ವದ ಹಿಡಿತ ಸಾಬೀತುಪಡಿಸಿದ್ದಾರೆ. ಈ ಮೂಲಕ ತಮ್ಮ ಎದುರಾಳಿ ಮಾಜಿ ಶಾಸಕ ಪ್ರೀತಂ ಗೌಡಗೆ ಠಕ್ಕರ್ ನೀಡಿದ್ದಾರೆ.
9ನೇ ವಾರ್ಡ್ ಜೆಡಿಎಸ್ ಸದಸ್ಯ ಎಂ ಚಂದ್ರೇಗೌಡ ಅಧ್ಯಕ್ಷರಾಗಿ ಹಾಗೂ ಜೆಡಿಎಸ್ ಬೆಂಬಲಿಸಿದ್ದ 35ನೇ ವಾರ್ಡ್ ಸದಸ್ಯೆ ಲತಾದೇವಿ ಸುರೇಶ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 35 ಸಂಖ್ಯಾಬಲದ ಹಾಸನ ನಗರಸಭೆಯಲ್ಲಿ ಜೆಡಿಎಸ್ 17, ಕಾಂಗ್ರೆಸ್ 2, ಬಿಜೆಪಿ 14 ಸದಸ್ಯರ ಬಲ ಹೊಂದಿದ್ದು, ಇಬ್ಬರು ಪಕ್ಷೇತರರಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲು ಒಟ್ಟು 19 ಮತಗಳ ಅಗತ್ಯವಿತ್ತು. ಇಬ್ಬರು ಕಾಂಗ್ರೆಸ್ ಸದಸ್ಯರನ್ನು ಹೊರತುಪಡಿಸಿ ಉಳಿದ ಎಲ್ಲಾ 34 ಸದಸ್ಯರು ಚಂದ್ರೇಗೌಡ ಪರ ಕೈ ಎತ್ತಿ ಮತ ಚಲಾಯಿಸಿದರು. ಈ ಮೂಲಕ ಚಂದ್ರೇಗೌಡ ಅವರು ಅಧ್ಯಕ್ಷರಾಗಿ ಆಯ್ಕೆಯಾದರು.
ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾದ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಸಹ ಮತ ಚಲಾಯಿಸಿದರು. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದರು. ಈ ಮೂಲಕ ಮಾಜಿ ಶಾಸಕ ಪ್ರೀತಂಗೌಡ ಅವರ ಕಾರ್ಯತಂತ್ರಗಳನ್ನು ವಿಫಲಗೊಳಿಸಿದರು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…