ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರ್ಸ್ವಾಮಿ ಅವರಿಂದು ಕುಲದೇವರ ಮೊರೆ ಹೋಗಿದ್ದು, ಪತ್ನಿ ರೇವತಿಯೊಡನೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟೂರಾಗಿರುವ ಹರದನಹಳ್ಳಿಯಲ್ಲಿ ಇಂದು ಕುಲದೇವರಾಗಿರುವ ದೇವೇಶ್ವರನಿಗೆ ಪತ್ನಿ ರೇವತಿ ಹಾಗೂ ಮಗನೊಡನೆ ಬಂದು ನಿಖಿಲ್ ಕುಮಾರಸ್ವಾಮಿ ಪೂಜೆ ನೆರವೇರಿಸಿದ್ದಾರೆ.
ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆ ದೇವರಿಗೆ ಪೂಜೆ ಸಲ್ಲಿಸುವುದು ಪತ್ನಿ ರೇವತಿಯವರ ಆಸೆಯಾಗಿತ್ತು. ಈ ಕಾರಣಕ್ಕಾಗಿ ಇಂದು ಹರದನಹಳ್ಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದೇವೆ. ಉಪ ಚುನಾವಣೆ ಫಲಿತಾಂಶಕ್ಕೆ ಇನ್ನು ಐದು ದಿನಗಳು ಬಾಕಿಯಿದ್ದು, ಗೆಲ್ಲುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಚುನಾವಣೆ ವೇಳೆ ಮಾಡಿದ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ನನ್ನ ಸ್ವಾಭಾವಿಕ ಗುಣದಂತೆ ಕೆಲವೊಂದು ವಿಚಾರಗಳನ್ನು ರಾಜ್ಯದ ಜನತೆಗೆ ಬಿಟ್ಟು ಬಿಡುತ್ತೇನೆ. ಏಕೆಂದರೆ ನಮ್ಮ ತಾತನವರಾದ ಎಚ್.ಡಿ.ದೇವೇಗೌಡ ಅವರಿಗೂ ರಾಮನಗರಕ್ಕೂ 1983 ವರ್ಷಗಳ ರಾಜಕೀಯ ನಂಟಿದೆ ಎಂದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…