Categories: ಹಾಸನ

ಕುಲದೇವರಿಗೆ ಪೂಜೆ ಸಲ್ಲಿಸಿದ ನಿಖಿಲ್‌ ಕುಮಾರಸ್ವಾಮಿ ದಂಪತಿ

ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್‌ ಕುಮಾರ್‌ಸ್ವಾಮಿ ಅವರಿಂದು ಕುಲದೇವರ ಮೊರೆ ಹೋಗಿದ್ದು, ಪತ್ನಿ ರೇವತಿಯೊಡನೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಹುಟ್ಟೂರಾಗಿರುವ ಹರದನಹಳ್ಳಿಯಲ್ಲಿ ಇಂದು ಕುಲದೇವರಾಗಿರುವ ದೇವೇಶ್ವರನಿಗೆ ಪತ್ನಿ ರೇವತಿ ಹಾಗೂ ಮಗನೊಡನೆ ಬಂದು ನಿಖಿಲ್‌ ಕುಮಾರಸ್ವಾಮಿ ಪೂಜೆ ನೆರವೇರಿಸಿದ್ದಾರೆ.

ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆ ದೇವರಿಗೆ ಪೂಜೆ ಸಲ್ಲಿಸುವುದು ಪತ್ನಿ ರೇವತಿಯವರ ಆಸೆಯಾಗಿತ್ತು. ಈ ಕಾರಣಕ್ಕಾಗಿ ಇಂದು ಹರದನಹಳ್ಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದೇವೆ. ಉಪ ಚುನಾವಣೆ ಫಲಿತಾಂಶಕ್ಕೆ ಇನ್ನು ಐದು ದಿನಗಳು ಬಾಕಿಯಿದ್ದು, ಗೆಲ್ಲುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರು ಚುನಾವಣೆ ವೇಳೆ ಮಾಡಿದ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಕಾಂಗ್ರೆಸ್‌ ನಾಯಕರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ನನ್ನ ಸ್ವಾಭಾವಿಕ ಗುಣದಂತೆ ಕೆಲವೊಂದು ವಿಚಾರಗಳನ್ನು ರಾಜ್ಯದ ಜನತೆಗೆ ಬಿಟ್ಟು ಬಿಡುತ್ತೇನೆ. ಏಕೆಂದರೆ ನಮ್ಮ ತಾತನವರಾದ ಎಚ್.ಡಿ.ದೇವೇಗೌಡ ಅವರಿಗೂ ರಾಮನಗರಕ್ಕೂ 1983 ವರ್ಷಗಳ ರಾಜಕೀಯ ನಂಟಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

23 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

23 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

23 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

23 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

23 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

24 hours ago